ಬೆಂಗಳೂರು: ದೇಶದಲ್ಲೇ ಮೊದಲ ಬಾರಿ ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರಿ ಕೋವಿಡ್ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ.
ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹಲವು ಸಚಿವರು ಮತ್ತು ತಜ್ಞರೊಂದಿಗೆ ಸಭೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ವರದಿಯ ಪ್ರಕಾರ ಒಮಿಕ್ರಾನ್ ಹೆಚ್ಚಿನ ತೀವ್ರತೆ ಹೊಂದಿಲ್ಲ. ಇದಿರಂದ ಯಾವುದೇ ಸಾವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದರು.
ನಿಯಮಗಳು:
ವಿಮಾನ ನಿಲ್ದಾಣದಲ್ಲಿ ಪ್ರತಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಪರೀಕ್ಷೆ ವರದಿ ಬಂದ ನಂತರವೇ ಪ್ರಯಾಣಿಕರನ್ನು ಹೊರಗೆ ಬಿಡಲಾಗುವುದು.
ಸಿನಿಮಾ ಹಾಲ್, ಮಾಲ್ ಗಳಿಗೆ ಪ್ರವೇಶಿಸಲು ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯ.
ಶಾಲೆಗೆ ಹೋಗುವ ಮಕ್ಕಳಿರುವ ಹೆತ್ತವರು ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು. ಇಲ್ಲದಿದ್ದಲ್ಲಿ ಶಾಲೆಗೆ ಮಕ್ಕಳನ್ನು ಕಳುಹಿಸುವಂತಿಲ್ಲ.
ಶಾಲೆ ಕಾಲೇಜುಗಳಲ್ಲಿ ಯಾವುದೇ ಸಮಾರಂಭ ನಡೆಸಲು ಅವಕಾಶವಿಲ್ಲ.
ಮದುವೆ ಸಮಾರಂಭಗಳಿಗೆ 500 ಜನರಿಗೆ ಮಾತ್ರ ಅವಕಾಶ.
ಕಂಟ್ರೋಲ್ ರೂಂ ಮತ್ತೆ ಆರಂಭ ಮಾಡಲಾಗುವುದು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…