Featured

ಭಂಡಾರಿ ಮನೆ ಮುಂದೆ ಅಳಲು ತೋಡಿಕೊಂಡ ಬೂತು ಮಟ್ಟದ ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತರು, ಸೀಟ್ ಬಿಟ್ಟು ಕೊಟ್ಟು ಕಾರ್ಕಳದಲ್ಲಿ ಕಾಂಗ್ರೆಸ್ ಉಳಿಸಿಯೆಂದು ವಿನಂತಿ.

ಕಾರ್ಕಳ : ರಾಜಕೀಯ ವಲಯವನ್ನು ತಲ್ಲಣಗೊಳಿಸಿದ್ದ ಕಾಂಗ್ರೆಸ್ ನಾಯಕ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿಗೆ ಸೀಟ್ ಬಿಟ್ಟು ಕೊಡುವಂತೆ ೧೫೦ ಕ್ಕೂ ಹೆಚ್ಚಿನ ಬೂತ್ ಪ್ರಮುಖರು ಇಂದು ಬೆಳಗ್ಗೆ ಗೋಪಾಲ ಭಂಡಾರಿ ಮನೆಗೆ ಭೇಟಿ ನೀಡಿ ” ಭಂಡಾರಿಯವರೇ ನಾವು ಇಷ್ಟು ವರ್ಷ ನಿಮ್ಮ ಜತೆ ಪಕ್ಷಕ್ಕಾಗಿ ಮತ್ತು ನಿಮಗಾಗಿ ಕಾರ್ಕಳದಲ್ಲಿ ದುಡಿದಿದ್ದೇವೆ. ನೀವು ಮಾತ್ರ ಹರ್ಷ ಮೊಯ್ಲಿ ಗೆ ಸೀಟ್ ಬಿಟ್ಟು ಕೊಡಲು ತಯಾರಿದ್ದೀರಿ ಆದರೆ ನಿಮ್ಮ ಅಪ್ಪಟ ಶಿಷ್ಯ ಮುನಿಯಾಲ್ ಉದಯ್ ಕುಮಾರ್ ಗೆ ಸೀಟ್ ಬಿಟ್ಟು ಕೊಡಲು ತಯಾರಿಲ್ಲ,ನೀವಂತೂ ಈ ಸಲ ಕಾರ್ಕಳದಲ್ಲಿ ಗೆಲುವು ಸಾಧಿಸಲು ಸಾದ್ಯವಿಲ್ಲ ಮತ್ತು ನಾವು ನಿಮ್ಮನ್ನು ಬೆಂಬಲಿಸುವುದಿಲ್ಲ , ನೀವು ದಯಮಾಡಿ ಉದಯ್ ಶೆಟ್ಟಿಗೆ ಸೀಟ್ ಬಿಟ್ಟುಕೊಟ್ಟು, ಪಕ್ಷದ ವರಿಷ್ಠರಾದ ವಿರಪ್ಪ ಮೊಯ್ಲಿಗೆ ಮನವರಿಕೆ ಮಾಡಿ, ಬಿ ಫಾರಮ್ ಶೆಟ್ರಿಗೆ ನೀಡಿ , ಇಲ್ಲಿ ನೀವು ಕಾಪಾಡಿಕೊಂಡು ಬಂದ ನಿಮ್ಮ ಘಣತೆ ಮತ್ತು ಗೌರವವನ್ನು ಉಳಿಸಿಕೊಳ್ಳಿ ಹಾಗೂ ಕಾರ್ಕಳದಲ್ಲಿ ಕಾಂಗ್ರೆಸ್ ನ ಅಭೂತಪೂರ್ವ ಗೆಲುವಿನಲ್ಲಿ ಸಹಕರಿಸಿ ಮತ್ತು ಪಕ್ಷ ಸಂಘಟನೆಗೆ ಕೈ ಜೋಡಿಸಿ ಎಂದರು. ಒಂದು ವೇಳೆ ನೀವು ಹಠಮಾಡಿ ನಾಮಪತ್ರ ಸಲ್ಲಿಸಿದ್ದೆ ಆದಲ್ಲಿ ೧೫೦ ಕ್ಕೂ ಹೆಚ್ಚಿನ ಕಡೆಯಲ್ಲಿ ಒಂದೇ ಒಂದು ಬೂತ್ ಹಾಕಲು ಬಿಡುವುದಿಲ್ಲವೆಂದು ಗೋಪಾಲ ಭಂಡಾರಿ ಮುಂದೆ ಆಗ್ರಹಿಸಿ ಪಕ್ಷದ ಹಲವಾರು ಮಂದಿ ಕಾರ್ಯಕರ್ತರು ಅಳಲು ತೋಡಿಕೊಂಡರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

4 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

4 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

24 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago