ಭಕ್ತಾಭಿಮಾನಿಗಳ ಶ್ರದ್ಧಾ ಭಕ್ತಿಯ ಗಣೇಶೋತ್ಸವ ಆಚರಣೆಯಿಂದ ಕೊರೋನ ಮಹಾಮಾರಿಯ ಸಂಕಷ್ಟ ಶೀಘ್ರದಲ್ಲಿಯೇ ನಿವಾರಣೆಯಾಗಲಿ : ಯಶ್ಪಾಲ್ ಸುವರ್ಣ -Vishwanews24
ಉಡುಪಿ: ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಬಗ್ಗೆ ಹೊಸ ಮಾರ್ಗಸೂಚಿಯ ಮೂಲಕ ಸರಳವಾಗಿ ನಡೆಸಲು ಅನುಮತಿಯನ್ನು ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್. ಯಡಿಯೂರಪ್ಪರವರ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಯಶ್ಪಾಲ್ ಸುವರ್ಣ ಸ್ವಾಗತಿಸಿದ್ದಾರೆ.
ರಾಜ್ಯದ ಅಸಂಖ್ಯ ಭಕ್ತರ ಭಾವನೆಗಳಿಗೆ ಸ್ಪಂದಿಸಿ ಕೋವಿಡ್ ಭೀತಿಯ ನಡುವೆಯೂ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲಿಸಿ, ಅವಕಾಶ ಕಲ್ಪಿಸಿದ ರಾಜ್ಯ ಸರಕಾರ ಹಾಗೂ ಸಹಕರಿಸಿದ ಎಲ್ಲಾ ಸಚಿವರು, ಶಾಸಕರಿಗೆ ಹಾಗೂ ಸಂಸದರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಬಾಲ ಗಂಗಾಧರ ತಿಲಕ್ರವರು ಆರಂಭಿಸಿದ ಸಾರ್ವಜನಿಕ ಗಣೇಶೋತ್ಸವ ಇದೀಗ ದೇಶದ ಸಂಸ್ಕøತಿಯ ಭಾಗವಾಗಿದ್ದು, ಕೊರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ಈ ಬಾರಿ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ ಪರಿಸರಸ್ನೇಹಿಯಾಗಿ ಆಚರಿಸುವಂತೆ ಮನವಿ ಮಾಡಿದ್ದಾರೆ.
ಭಕ್ತಾಭಿಮಾನಿಗಳ ಶ್ರದ್ಧಾ ಭಕ್ತಿಯ ಗಣೇಶೋತ್ಸವ ಆಚರಣೆಯಿಂದ ಕೊರೋನ ಮಹಾಮಾರಿಯ ಸಂಕಷ್ಟ ಶೀಘ್ರದಲ್ಲಿಯೇ ನಿವಾರಣೆಯಾಗಲಿ ಎಂದು ಆಶಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
