Featured

ಭಗತ್ ಸಿಂಗ್, ನಾರಾಯಣಗುರು ಪಾಠ ತೆಗೆದುಹಾಕಿಲ್ಲ :  ಸಚಿವ ಆರ್. ಅಶೋಕ್ ಸ್ಪಷ್ಟನೆ – Vishwanews24

ಸಿದ್ದರಾಮಯ್ಯಗೆ ಟಿಪ್ಪು ಸುಲ್ತಾನ್ ಅಂದ್ರೆ ದೇವರು ಮೈಮೇಲೆ ಬರುತ್ತೆ..

ನಾವು ಪಠ್ಯ ತೆಗೆದುಹಾಕಿದ್ದೇವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ..

ಹಿಂದುಗಳು ಮಲಗಿದ್ದರೆ ದೇಶ ಮಲಗಿರುತ್ತೆ ಎಂಬ ಭ್ರಮೆಯಲ್ಲಿದ್ದಾರೆ..

ಬೆಂಗಳೂರು : ನಮ್ಮ ಸಿದ್ದರಾಮಯ್ಯಗೆ ಟಿಪ್ಪು ಸುಲ್ತಾನ್ ಅಂದ್ರೆ ದೇವರು ಮೈಮೇಲೆ ಬರುತ್ತೆ, ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು ಎಂದು ಕಂದಾಯ ಸಚಿವ ಆರ್. ಅಶೋಕ್ ಆರೋಪಿಸಿದ್ದಾರೆ.

ಪಠ್ಯಪುಸ್ತಕ ವಿವಾದ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಿದ್ದರಾಮಯ್ಯಗೆ ಟಿಪ್ಪು ಸುಲ್ತಾನ್ ಅಂದ್ರೆ ದೇವರು ಮೈಮೇಲೆ ಬರುತ್ತೆ, ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ. ಅನೇಕ ಜನರನ್ನು ಮತಾಂತರ ಮಾಡಿದ್ದ ಎಂದರು.

ನಮ್ಮ ಸರ್ಕಾರದಲ್ಲಿ ಭಗತ್ ಸಿಂಗ್, ನಾರಾಯಣಗುರು ಪಠ್ಯವನ್ನು ತೆಗೆದುಹಾಕಿಲ್ಲ. ನಾವು ಪಠ್ಯ ತೆಗೆದುಹಾಕಿದ್ದೇವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಕಾಲದಲ್ಲಿ ಸಿಂಧು ಸಂಸ್ಕೃತಿ ಕುರಿತ ಪಾಠ ಕೈಬಿಡಲಾಗಿತ್ತು. ನಿಟ್ಟೂರು ಶ್ರೀನಿವಾಸರಾಯರ ಪಾಠವನ್ನು ಕೈಬಿಡಲಾಗಿತ್ತು. ನಮ್ಮ ಸರ್ಕಾರ ರಾಣಿ ಚನ್ನಬೈರಾದೇವಿ ಅವರ ಪಾಠವನ್ನು ಸೇರಿಸಲಾಗಿದೆ ಎಂದರು.

ಹಿಂದಿನ ಸರ್ಕಾರವು ಕೆಲವು ಪಠ್ಯಗಳನ್ನು ತೆಗೆದು ಹಾಕಿದ್ದಾವೆ. ಇವರಿಗೆ ರಾಮ, ಈಶ್ವರ ಹೆಸರು ಕೇಳಲು ಇಷ್ಟವಿರಲ್ಲ. ಹಿಂದೆ ಅವರಿಗೆ ಬೇಕಾದಂತೆ ಪಠ್ಯ ಪರಿಷ್ಕರಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಸರ್ಕಾರದ ಪಠ್ಯಪರಿಷ್ಕರಣೆ ಅವಧಿಯಲ್ಲಿ ಕುವೆಂಪು ಅವರ 8 ಪದ್ಯಗಳನ್ನು ಸೇರಿಸಲಾಗಿದೆ. ಹಿಡನ್ ಅಜೆಂಟ್ ಇರುವ ಕೆಲ ಸಾಹಿತಿಗಳು ಭ್ರಮೆಯಲ್ಲಿದ್ದಾರೆ. ಹಿಂದುಗಳು ಮಲಗಿದ್ದರೆ ದೇಶ ಮಲಗಿರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲ ಪಠ್ಯ ಪುಸ್ತಕಗಳು ಬದಲಾವಣೆಯಾಗಿವೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಯಾರೂ ಯಾಕೆ ಧ್ವನಿ ಎತ್ತಲಿಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

1 hour ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

11 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

11 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

11 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago