Featured

ಭಗತ್ ಸಿಂಗ್, ನಾರಾಯಣಗುರು ಪಾಠ ತೆಗೆದುಹಾಕಿಲ್ಲ :  ಸಚಿವ ಆರ್. ಅಶೋಕ್ ಸ್ಪಷ್ಟನೆ – Vishwanews24

ಸಿದ್ದರಾಮಯ್ಯಗೆ ಟಿಪ್ಪು ಸುಲ್ತಾನ್ ಅಂದ್ರೆ ದೇವರು ಮೈಮೇಲೆ ಬರುತ್ತೆ..

ನಾವು ಪಠ್ಯ ತೆಗೆದುಹಾಕಿದ್ದೇವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ..

ಹಿಂದುಗಳು ಮಲಗಿದ್ದರೆ ದೇಶ ಮಲಗಿರುತ್ತೆ ಎಂಬ ಭ್ರಮೆಯಲ್ಲಿದ್ದಾರೆ..

ಬೆಂಗಳೂರು : ನಮ್ಮ ಸಿದ್ದರಾಮಯ್ಯಗೆ ಟಿಪ್ಪು ಸುಲ್ತಾನ್ ಅಂದ್ರೆ ದೇವರು ಮೈಮೇಲೆ ಬರುತ್ತೆ, ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು ಎಂದು ಕಂದಾಯ ಸಚಿವ ಆರ್. ಅಶೋಕ್ ಆರೋಪಿಸಿದ್ದಾರೆ.

ಪಠ್ಯಪುಸ್ತಕ ವಿವಾದ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಿದ್ದರಾಮಯ್ಯಗೆ ಟಿಪ್ಪು ಸುಲ್ತಾನ್ ಅಂದ್ರೆ ದೇವರು ಮೈಮೇಲೆ ಬರುತ್ತೆ, ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ. ಅನೇಕ ಜನರನ್ನು ಮತಾಂತರ ಮಾಡಿದ್ದ ಎಂದರು.

ನಮ್ಮ ಸರ್ಕಾರದಲ್ಲಿ ಭಗತ್ ಸಿಂಗ್, ನಾರಾಯಣಗುರು ಪಠ್ಯವನ್ನು ತೆಗೆದುಹಾಕಿಲ್ಲ. ನಾವು ಪಠ್ಯ ತೆಗೆದುಹಾಕಿದ್ದೇವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಕಾಲದಲ್ಲಿ ಸಿಂಧು ಸಂಸ್ಕೃತಿ ಕುರಿತ ಪಾಠ ಕೈಬಿಡಲಾಗಿತ್ತು. ನಿಟ್ಟೂರು ಶ್ರೀನಿವಾಸರಾಯರ ಪಾಠವನ್ನು ಕೈಬಿಡಲಾಗಿತ್ತು. ನಮ್ಮ ಸರ್ಕಾರ ರಾಣಿ ಚನ್ನಬೈರಾದೇವಿ ಅವರ ಪಾಠವನ್ನು ಸೇರಿಸಲಾಗಿದೆ ಎಂದರು.

ಹಿಂದಿನ ಸರ್ಕಾರವು ಕೆಲವು ಪಠ್ಯಗಳನ್ನು ತೆಗೆದು ಹಾಕಿದ್ದಾವೆ. ಇವರಿಗೆ ರಾಮ, ಈಶ್ವರ ಹೆಸರು ಕೇಳಲು ಇಷ್ಟವಿರಲ್ಲ. ಹಿಂದೆ ಅವರಿಗೆ ಬೇಕಾದಂತೆ ಪಠ್ಯ ಪರಿಷ್ಕರಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಸರ್ಕಾರದ ಪಠ್ಯಪರಿಷ್ಕರಣೆ ಅವಧಿಯಲ್ಲಿ ಕುವೆಂಪು ಅವರ 8 ಪದ್ಯಗಳನ್ನು ಸೇರಿಸಲಾಗಿದೆ. ಹಿಡನ್ ಅಜೆಂಟ್ ಇರುವ ಕೆಲ ಸಾಹಿತಿಗಳು ಭ್ರಮೆಯಲ್ಲಿದ್ದಾರೆ. ಹಿಂದುಗಳು ಮಲಗಿದ್ದರೆ ದೇಶ ಮಲಗಿರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲ ಪಠ್ಯ ಪುಸ್ತಕಗಳು ಬದಲಾವಣೆಯಾಗಿವೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಯಾರೂ ಯಾಕೆ ಧ್ವನಿ ಎತ್ತಲಿಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago