ಬೆಂಗಳೂರು : ನಮ್ಮ ಸಿದ್ದರಾಮಯ್ಯಗೆ ಟಿಪ್ಪು ಸುಲ್ತಾನ್ ಅಂದ್ರೆ ದೇವರು ಮೈಮೇಲೆ ಬರುತ್ತೆ, ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು ಎಂದು ಕಂದಾಯ ಸಚಿವ ಆರ್. ಅಶೋಕ್ ಆರೋಪಿಸಿದ್ದಾರೆ.
ಪಠ್ಯಪುಸ್ತಕ ವಿವಾದ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಿದ್ದರಾಮಯ್ಯಗೆ ಟಿಪ್ಪು ಸುಲ್ತಾನ್ ಅಂದ್ರೆ ದೇವರು ಮೈಮೇಲೆ ಬರುತ್ತೆ, ಸಿದ್ದರಾಮಯ್ಯ ಕಾಲದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣ ಮಾಡಿ, ಮೈಸೂರು ರಾಜವಂಶಸ್ಥರನ್ನು ಕಡೆಗಣನೆ ಮಾಡಿದ್ದರು ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ. ಅನೇಕ ಜನರನ್ನು ಮತಾಂತರ ಮಾಡಿದ್ದ ಎಂದರು.
ನಮ್ಮ ಸರ್ಕಾರದಲ್ಲಿ ಭಗತ್ ಸಿಂಗ್, ನಾರಾಯಣಗುರು ಪಠ್ಯವನ್ನು ತೆಗೆದುಹಾಕಿಲ್ಲ. ನಾವು ಪಠ್ಯ ತೆಗೆದುಹಾಕಿದ್ದೇವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಕಾಲದಲ್ಲಿ ಸಿಂಧು ಸಂಸ್ಕೃತಿ ಕುರಿತ ಪಾಠ ಕೈಬಿಡಲಾಗಿತ್ತು. ನಿಟ್ಟೂರು ಶ್ರೀನಿವಾಸರಾಯರ ಪಾಠವನ್ನು ಕೈಬಿಡಲಾಗಿತ್ತು. ನಮ್ಮ ಸರ್ಕಾರ ರಾಣಿ ಚನ್ನಬೈರಾದೇವಿ ಅವರ ಪಾಠವನ್ನು ಸೇರಿಸಲಾಗಿದೆ ಎಂದರು.
ಹಿಂದಿನ ಸರ್ಕಾರವು ಕೆಲವು ಪಠ್ಯಗಳನ್ನು ತೆಗೆದು ಹಾಕಿದ್ದಾವೆ. ಇವರಿಗೆ ರಾಮ, ಈಶ್ವರ ಹೆಸರು ಕೇಳಲು ಇಷ್ಟವಿರಲ್ಲ. ಹಿಂದೆ ಅವರಿಗೆ ಬೇಕಾದಂತೆ ಪಠ್ಯ ಪರಿಷ್ಕರಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನಮ್ಮ ಸರ್ಕಾರದ ಪಠ್ಯಪರಿಷ್ಕರಣೆ ಅವಧಿಯಲ್ಲಿ ಕುವೆಂಪು ಅವರ 8 ಪದ್ಯಗಳನ್ನು ಸೇರಿಸಲಾಗಿದೆ. ಹಿಡನ್ ಅಜೆಂಟ್ ಇರುವ ಕೆಲ ಸಾಹಿತಿಗಳು ಭ್ರಮೆಯಲ್ಲಿದ್ದಾರೆ. ಹಿಂದುಗಳು ಮಲಗಿದ್ದರೆ ದೇಶ ಮಲಗಿರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲ ಪಠ್ಯ ಪುಸ್ತಕಗಳು ಬದಲಾವಣೆಯಾಗಿವೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಯಾರೂ ಯಾಕೆ ಧ್ವನಿ ಎತ್ತಲಿಲ್ಲ ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…