ಕಾರವಾರ : ಯಾವುದೇ ಸೂಕ್ತ ದಾಖಲೆಗಳಿಲ್ಲದೇ ಕಳೆದ ಆರು ವರ್ಷಗಳಿಂದ ಭಟ್ಕಳದ ನವಾಯತ ಕಾಲೋನಿಯಲ್ಲಿ ವಾಸವಾಗಿದ್ದ ಪಾಕಿಸ್ತಾನಿ ಮಹಿಳೆಯೋರ್ವಳನ್ನು ಭಟ್ಕಳ ನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಮಹಿಳೆಯನ್ನು ಖತೀಜಾ ಮೆಹರಿನ್ ಎಂದು ಗುರುತಿಸಲಾಗಿದೆ.
ಈ ಮಹಿಳೆ ನವಾಯತ ಕಾಲೋನಿಯಲ್ಲಿ 2015ರಿಂದ ಅಕ್ರಮವಾಗಿ ವಾಸ್ತವ್ಯ ಮಾಡಿಕೊಂಡಿದ್ದು, ಮಹಿಳೆಯು ವೀಸಾ ಹಾಗೂ ವಾಸ್ತವ್ಯ ಮಾಡಲು ಪರವಾನಿಗೆಯನ್ನು ಕೂಡಾ ಹೊಂದಿಲ್ಲ ಎನ್ನಲಾಗಿದೆ.
ಪಾಕಿಸ್ತಾನ ಪ್ರಜೆಯಾಗಿರುವ ಖತೀಜಾ ಭಟ್ಕಳದ ನವಾಯತ ಕಾಲೋನಿಯ ನಿವಾಸಿ ಜಾವೀದ್ ಮೊಹಿದ್ದೀನ ರುಕ್ನುದ್ದೀನ್ ಈತನನ್ನು ಸುಮಾರು ಆರು ವರ್ಷಗಳ ಹಿಂದೆ ದುಬೈಯಲ್ಲಿ ವಿವಾಹವಾಗಿದ್ದು, ಬಳಿಕ 2014ರಲ್ಲಿ ಮೂರು ತಿಂಗಳ ವಿಸಿಟಿಂಗ್ ವೀಸಾದೊಂದಿಗೆ ಭಾರತಕ್ಕೆ ಬಂದು ಹಿಂತಿರುಗಿದ್ದ ಈಕೆಯು ಮತ್ತೆ ಪುನ: 2015ರಲ್ಲಿ ಯಾವುದೇ ಸೂಕ್ತ ದಾಖಲೆಯಿಲ್ಲದೇ ಭಾರತದೊಳಕ್ಕೆ ಬಂದು ಗೌಪ್ಯವಾಗಿ ಭಟ್ಕಳದಲ್ಲಿ ತನ್ನ ಮೂವರು ಮಕ್ಕಳೊಂದಿಗೆ ತನ್ನ ಪತಿಯ ಮನೆಯಾದ ನವಾಯತ ಕಾಲೋನಿಯ ವೈಟ್ ಹೌಸ್ನಲ್ಲಿ ನೆಲೆಸಿದ್ದಳು.
ಇನ್ನು ಅಕ್ರಮವಾಗಿ ಪ್ರವೇಶ ಪಡೆದಿದ್ದರೂ ಈಕೆಯಲ್ಲಿ ಇಲ್ಲಿನ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ, ರೇಶನ್ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಎಲ್ಲವೂ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಖಚಿತ ಮಾಹಿತಿಯನ್ನು ಕಲೆ ಹಾಕಿದ ಪೊಲೀಸ್ ಇಲಾಖೆ ಅಕ್ರಮವಾಗಿ ನೆಲೆಸಿರುವುದನ್ನು ಖಚಿತಪಡಿಸಿಕೊಂಡು ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಮನೆಯನ್ನು ಶೋಧ ಮಾಡಿದಾಗ ಈಕೆಯು ಇರುವುದು ಖಚಿತವಾಗಿದ್ದು ಆಕೆಯನ್ನು ಬಂಧಿಸಿ ವಿದೇಶಿಯರ ಕಾಯ್ದೆ ಕಲಂ 14, 14 (ಎ)(ಬಿ), ಹಾಗೂ ಐ.ಪಿ.ಸಿ. ಕಲಂ 468 ಹಾಗೂ 471ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ವರದಿಯಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…