ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬೆಂಳಬರ್ದ ಸುರೇಶ್ ಕಾರ್ವಿ ಎಂಬವರಿಗೆ ಸೇರಿದ ಮತ್ಯಾಂಜನೇಯ ಎಂಬ ಬೋಟ್ನಲ್ಲಿ ಆರು ಜನರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ತಾಂತ್ರಿಕ ಕಾರಣದಿಂದಾಗಿ ಭಟ್ಕಳದಿಂದ 19 ನಾಟಿಕನ್ ಮೈಲುದೂರದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆಯಾಗಿದೆ.
ಬೋಟ್ ನಲ್ಲಿ ಇದ್ದ ಆರು ಜನರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೋಟ್ ಸಂಪೂರ್ಣ ಮುಳುಗಡೆ ಆಗಿದ್ದರಿಂದ ಲಕ್ಷಾಂತರರೂಪಾಯಿ ಹಾನಿಯಾಗಿದ್ದು ಸ್ಥಳಕ್ಕೆ ಕರಾವಳಿ ಕಾವಲುಪಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ರಾತ್ರಿ ಅಂಕೋಲದಿಂದ ಭಟ್ಕಳದ ಅರಬ್ಬಿ ಸಮುದ್ರ ಭಾಗದಲ್ಲಿ ನಿಷೇಧಿತ ಲೈಟ್ ಪಿಷಿಂಗ್ ಗೆ ಈ ಬೋಟು ತೆರಳಿತ್ತು ಎಂದು ಪ್ರಾಥಮಿಕ ಮಾಹಿತಿ ದೊರೆತಿದೆ. ಜೊತೆಗೆ ಬೋಟ್ ಗೆ ವಿಮೆ ಕೂಡ ಮಾಡಿಸಿರಲಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ಈ ಕುರಿತು ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಅದೃಷ್ಟವಶಾತ್ ಬೋಟ್ ನಲ್ಲಿ ಇದ್ದ ಎಲ್ಲರೂ ಪಾರಾಗಿದ್ದು ಬೋಟ್ ಮುಳುಗಡೆ ಆಗುವ ವೇಳೆ ಪಕ್ಕದಲ್ಲೇ ಮೀನುಗಾರಿಕೆ ನಡೆಸುತಿದ್ದ ಮೀನುಗಾರರು ಎಲ್ಲರನ್ನೂ ರಕ್ಷಣೆ ಮಾಡಿದ್ದಾರೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…
ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್…
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ…
ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ ಬೆಂಗಳೂರು: ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆಗೆ…
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್…