ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬೆಂಳಬರ್ದ ಸುರೇಶ್ ಕಾರ್ವಿ ಎಂಬವರಿಗೆ ಸೇರಿದ ಮತ್ಯಾಂಜನೇಯ ಎಂಬ ಬೋಟ್ನಲ್ಲಿ ಆರು ಜನರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ತಾಂತ್ರಿಕ ಕಾರಣದಿಂದಾಗಿ ಭಟ್ಕಳದಿಂದ 19 ನಾಟಿಕನ್ ಮೈಲುದೂರದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆಯಾಗಿದೆ.
ಬೋಟ್ ನಲ್ಲಿ ಇದ್ದ ಆರು ಜನರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೋಟ್ ಸಂಪೂರ್ಣ ಮುಳುಗಡೆ ಆಗಿದ್ದರಿಂದ ಲಕ್ಷಾಂತರರೂಪಾಯಿ ಹಾನಿಯಾಗಿದ್ದು ಸ್ಥಳಕ್ಕೆ ಕರಾವಳಿ ಕಾವಲುಪಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ರಾತ್ರಿ ಅಂಕೋಲದಿಂದ ಭಟ್ಕಳದ ಅರಬ್ಬಿ ಸಮುದ್ರ ಭಾಗದಲ್ಲಿ ನಿಷೇಧಿತ ಲೈಟ್ ಪಿಷಿಂಗ್ ಗೆ ಈ ಬೋಟು ತೆರಳಿತ್ತು ಎಂದು ಪ್ರಾಥಮಿಕ ಮಾಹಿತಿ ದೊರೆತಿದೆ. ಜೊತೆಗೆ ಬೋಟ್ ಗೆ ವಿಮೆ ಕೂಡ ಮಾಡಿಸಿರಲಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ಈ ಕುರಿತು ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಅದೃಷ್ಟವಶಾತ್ ಬೋಟ್ ನಲ್ಲಿ ಇದ್ದ ಎಲ್ಲರೂ ಪಾರಾಗಿದ್ದು ಬೋಟ್ ಮುಳುಗಡೆ ಆಗುವ ವೇಳೆ ಪಕ್ಕದಲ್ಲೇ ಮೀನುಗಾರಿಕೆ ನಡೆಸುತಿದ್ದ ಮೀನುಗಾರರು ಎಲ್ಲರನ್ನೂ ರಕ್ಷಣೆ ಮಾಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…