ಭಟ್ಕಳ : ಉಡುಪಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಭಟ್ಕಳ ಸಮೀಪ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುವ ಸ್ಥಿತಿಗೆ ತಲುಪಿದ್ದು ಬೋಟಿನಲ್ಲಿದ್ದ ಮೀನುಗಾರರನ್ನು ರಕ್ಷಿಸಲಾಗಿದೆ.
ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದ ಕಾರಣ ಅಲೆಗಳ ಅಬ್ಬರಕ್ಕೆ ಸಿಲುಕಿ ಸಾಯಿ ಚರಣ್ ಹೆಸರಿನ ಈ ಬೋಟ್ಗೆ ಹಾನಿಯಾಗಿದೆ. ಬೋಟ್ನ ಫ್ಯಾನ್ಗೆ ಮೀನಿನ ಬಲೆ ಸಿಲುಕಿತ್ತು. ಹೀಗಾಗಿ ಮುಂದೆ ಸಾಗಲಾಗದೆ ಮುಳುಗುವ ಸ್ಥಿತಿಯಲ್ಲಿದ್ದ ಬೋಟನ್ನು ಭಟ್ಕಳದ ಇನ್ನೊಂದು ಮೀನುಗಾರಿಕಾ ಬೋಟ್ನವರು ರಕ್ಷಿಸಿ ಹಗ್ಗ ಕಟ್ಟಿ ಎಳೆದು ತರುತ್ತಿದ್ದರು.
ಆದರೆ ತೀರಕ್ಕೆ ತಲುಪುವ ಮೊದಲೇ ಹಗ್ಗ ತುಂಡಾಗಿ ಭಟ್ಕಳದ ಹೆಬಳೆ ಪಂಚಾಯತ್ನ ತೆಂಗಿನಗುಂಡಿ ವ್ಯಾಪ್ತಿಯ ಸಮುದ್ರ ತೀರದ ಕಲ್ಲಿನ ರಾಶಿಯಲ್ಲಿ ಬೋಟ್ ಸಿಲುಕಿಕೊಂಡಿದೆ. ಅಲೆಗಳ ಅಬ್ಬರ ಹೆಚ್ಚಾಗ್ಗಿರುವುದರಿಂದ ಬೋಟನ್ನು ಹೊರತರಲಾರದೆ ಅಲ್ಲಿಯೇ ಬಿಡಲಾಗಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು ದೋಣಿಯಲ್ಲಿವೆ . ಬೋಟ್ನಲ್ಲಿದ್ದ ಮೀನುಗಾರರು ಸುರಕ್ಷಿತವಾಗಿ ದಡ ಸೇರಿದ್ದಾರೆ.
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…