ಭಟ್ಕಳ : ಉಡುಪಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಭಟ್ಕಳ ಸಮೀಪ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುವ ಸ್ಥಿತಿಗೆ ತಲುಪಿದ್ದು ಬೋಟಿನಲ್ಲಿದ್ದ ಮೀನುಗಾರರನ್ನು ರಕ್ಷಿಸಲಾಗಿದೆ.
ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದ ಕಾರಣ ಅಲೆಗಳ ಅಬ್ಬರಕ್ಕೆ ಸಿಲುಕಿ ಸಾಯಿ ಚರಣ್ ಹೆಸರಿನ ಈ ಬೋಟ್ಗೆ ಹಾನಿಯಾಗಿದೆ. ಬೋಟ್ನ ಫ್ಯಾನ್ಗೆ ಮೀನಿನ ಬಲೆ ಸಿಲುಕಿತ್ತು. ಹೀಗಾಗಿ ಮುಂದೆ ಸಾಗಲಾಗದೆ ಮುಳುಗುವ ಸ್ಥಿತಿಯಲ್ಲಿದ್ದ ಬೋಟನ್ನು ಭಟ್ಕಳದ ಇನ್ನೊಂದು ಮೀನುಗಾರಿಕಾ ಬೋಟ್ನವರು ರಕ್ಷಿಸಿ ಹಗ್ಗ ಕಟ್ಟಿ ಎಳೆದು ತರುತ್ತಿದ್ದರು.
ಆದರೆ ತೀರಕ್ಕೆ ತಲುಪುವ ಮೊದಲೇ ಹಗ್ಗ ತುಂಡಾಗಿ ಭಟ್ಕಳದ ಹೆಬಳೆ ಪಂಚಾಯತ್ನ ತೆಂಗಿನಗುಂಡಿ ವ್ಯಾಪ್ತಿಯ ಸಮುದ್ರ ತೀರದ ಕಲ್ಲಿನ ರಾಶಿಯಲ್ಲಿ ಬೋಟ್ ಸಿಲುಕಿಕೊಂಡಿದೆ. ಅಲೆಗಳ ಅಬ್ಬರ ಹೆಚ್ಚಾಗ್ಗಿರುವುದರಿಂದ ಬೋಟನ್ನು ಹೊರತರಲಾರದೆ ಅಲ್ಲಿಯೇ ಬಿಡಲಾಗಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು ದೋಣಿಯಲ್ಲಿವೆ . ಬೋಟ್ನಲ್ಲಿದ್ದ ಮೀನುಗಾರರು ಸುರಕ್ಷಿತವಾಗಿ ದಡ ಸೇರಿದ್ದಾರೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…