ಭಟ್ಕಳ : ಉಡುಪಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಭಟ್ಕಳ ಸಮೀಪ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುವ ಸ್ಥಿತಿಗೆ ತಲುಪಿದ್ದು ಬೋಟಿನಲ್ಲಿದ್ದ ಮೀನುಗಾರರನ್ನು ರಕ್ಷಿಸಲಾಗಿದೆ.
ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದ ಕಾರಣ ಅಲೆಗಳ ಅಬ್ಬರಕ್ಕೆ ಸಿಲುಕಿ ಸಾಯಿ ಚರಣ್ ಹೆಸರಿನ ಈ ಬೋಟ್ಗೆ ಹಾನಿಯಾಗಿದೆ. ಬೋಟ್ನ ಫ್ಯಾನ್ಗೆ ಮೀನಿನ ಬಲೆ ಸಿಲುಕಿತ್ತು. ಹೀಗಾಗಿ ಮುಂದೆ ಸಾಗಲಾಗದೆ ಮುಳುಗುವ ಸ್ಥಿತಿಯಲ್ಲಿದ್ದ ಬೋಟನ್ನು ಭಟ್ಕಳದ ಇನ್ನೊಂದು ಮೀನುಗಾರಿಕಾ ಬೋಟ್ನವರು ರಕ್ಷಿಸಿ ಹಗ್ಗ ಕಟ್ಟಿ ಎಳೆದು ತರುತ್ತಿದ್ದರು.
ಆದರೆ ತೀರಕ್ಕೆ ತಲುಪುವ ಮೊದಲೇ ಹಗ್ಗ ತುಂಡಾಗಿ ಭಟ್ಕಳದ ಹೆಬಳೆ ಪಂಚಾಯತ್ನ ತೆಂಗಿನಗುಂಡಿ ವ್ಯಾಪ್ತಿಯ ಸಮುದ್ರ ತೀರದ ಕಲ್ಲಿನ ರಾಶಿಯಲ್ಲಿ ಬೋಟ್ ಸಿಲುಕಿಕೊಂಡಿದೆ. ಅಲೆಗಳ ಅಬ್ಬರ ಹೆಚ್ಚಾಗ್ಗಿರುವುದರಿಂದ ಬೋಟನ್ನು ಹೊರತರಲಾರದೆ ಅಲ್ಲಿಯೇ ಬಿಡಲಾಗಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು ದೋಣಿಯಲ್ಲಿವೆ . ಬೋಟ್ನಲ್ಲಿದ್ದ ಮೀನುಗಾರರು ಸುರಕ್ಷಿತವಾಗಿ ದಡ ಸೇರಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…