Featured

ಭಟ್ಕಳ :  ಜಾನುವಾರುಗಳಿಗೆ ಚರ್ಮಗಂಟು ರೋಗ : ಆಕಳು ಸಾವು ,ಹೈನುಗಾರ ರೈತರಲ್ಲಿ ಆತಂಕ – Vishwanews24

ಭಟ್ಕಳ :  ಜಾನುವಾರುಗಳಿಗೆ ಚರ್ಮಗಂಟು ರೋಗ : ಆಕಳು ಸಾವು

ಭಟ್ಕಳ, : ತಾಲೂಕಿನ ಮಾರುಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಹೈನುಗಾರ ರೈತರಲ್ಲಿ ಆತಂಕ ಮೂಡಿಸಿದೆ.

ಕಳೆದ ಹತ್ತಾರು ದಿನಗಳಿಂದ ಈ ಭಾಗದ ರೋಗ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಗಣಪತಿ ಹೆಗ್ಡೆ ಎಂಬವರಿಗೆ ಸೇರಿದ ಸುಮಾರು 50 ಸಾವಿರ ರೂ.ಮೌಲ್ಯದ ಗಿರ್ ತಳಿಯ ಆಕಳೊಂದು ರೋಗಬಾಧೆಯಿಂದ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಈ ಭಾಗದಲ್ಲಿ ಜಾನುವಾರುಗಳಲ್ಲಿ ರೋಗ ಉಲ್ಬಣಗೊಳ್ಳುತ್ತಿದೆ. ಆದರೆ ಈ ಬಗ್ಗೆ ಸ್ಥಳೀಯ ಪಂಚಾಯತ್ ಆಗಲಿ ಪಶು ಅಧಿಕಾರಿಗಳಾಗಲಿ ರೋಗದ ಬಗ್ಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಹೈನುಗಾರ ರೈತರಿಗೆ ಮಾಹಿತಿ ನೀಡಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದೆ.

“ತಾಲೂಕಿನಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಏರಿಕೆ ಕಾಣುತ್ತಿದ್ದು, ವ್ಯಾಕ್ಸಿನ್ ಕಾರ್ಯ ಭರದಿಂದ ಸಾಗಿದೆ. ತಾಲೂಕಿನಲ್ಲಿ ಈ ರೋಗಕ್ಕೆ ಸಾವನ್ನಪ್ಪಿದ ಮೊದಲ ಪ್ರಕರಣವಾಗಿದೆ. ಈಗಾಗಲೇ 11,000ಕ್ಕೂ ಅಧಿಕ ಜಾನುವಾರುಗಳಿಗೆ ವ್ಯಾಕ್ಸಿನ್ ನೀಡಲಾಗಿದೆ. ಸಿಬ್ಬಂದಿಯ ಕೊರತೆಯಿಂದ ವ್ಯಾಕ್ಸಿನ್ ಕಾರ್ಯ ಕುಂಠಿತಗೊಳ್ಳುತ್ತಿದೆ. ರೈತರು ರೋಗ ಕಂಡುಬಂದ ಜಾನುವಾರನ್ನು ಪ್ರತ್ಯೇಕವಿಟ್ಟು ಔಷಧೋಪಚಾರ ಮಾಡಿದ್ದಲ್ಲಿ ರೋಗ ಹತೋಟಿಗೆ ತರಬಹುದು. ಒಂದೊಮ್ಮೆ ರೋಗದಿಂದ ಜಾನುವಾರು ಸಾವನ್ನಪ್ಪದಲ್ಲಿ ಸ್ಥಳೀಯ ಪಶು ಇಲಾಖೆಗೆ ಮಾಹಿತಿ ನೀಡಿದರೆ ಸರಕಾರದಿಂದ ಸಿಗುವ ಪರಿಹಾರ ದೊರಕಿಸಿಕೊಡಲಾಗುವುದು.”

-ಡಾ. ಶಿವಕುಮಾರ ಪಶು ವೈದ್ಯಾಧಿಕಾರಿ, ಭಟ್ಕಳ

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

13 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

14 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

14 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

14 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

18 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

19 hours ago