Featured

ಭಟ್ಕಳ :  ಜಾನುವಾರುಗಳಿಗೆ ಚರ್ಮಗಂಟು ರೋಗ : ಆಕಳು ಸಾವು ,ಹೈನುಗಾರ ರೈತರಲ್ಲಿ ಆತಂಕ – Vishwanews24

ಭಟ್ಕಳ :  ಜಾನುವಾರುಗಳಿಗೆ ಚರ್ಮಗಂಟು ರೋಗ : ಆಕಳು ಸಾವು

ಭಟ್ಕಳ, : ತಾಲೂಕಿನ ಮಾರುಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಹೈನುಗಾರ ರೈತರಲ್ಲಿ ಆತಂಕ ಮೂಡಿಸಿದೆ.

ಕಳೆದ ಹತ್ತಾರು ದಿನಗಳಿಂದ ಈ ಭಾಗದ ರೋಗ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಗಣಪತಿ ಹೆಗ್ಡೆ ಎಂಬವರಿಗೆ ಸೇರಿದ ಸುಮಾರು 50 ಸಾವಿರ ರೂ.ಮೌಲ್ಯದ ಗಿರ್ ತಳಿಯ ಆಕಳೊಂದು ರೋಗಬಾಧೆಯಿಂದ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಈ ಭಾಗದಲ್ಲಿ ಜಾನುವಾರುಗಳಲ್ಲಿ ರೋಗ ಉಲ್ಬಣಗೊಳ್ಳುತ್ತಿದೆ. ಆದರೆ ಈ ಬಗ್ಗೆ ಸ್ಥಳೀಯ ಪಂಚಾಯತ್ ಆಗಲಿ ಪಶು ಅಧಿಕಾರಿಗಳಾಗಲಿ ರೋಗದ ಬಗ್ಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಹೈನುಗಾರ ರೈತರಿಗೆ ಮಾಹಿತಿ ನೀಡಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದೆ.

“ತಾಲೂಕಿನಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಏರಿಕೆ ಕಾಣುತ್ತಿದ್ದು, ವ್ಯಾಕ್ಸಿನ್ ಕಾರ್ಯ ಭರದಿಂದ ಸಾಗಿದೆ. ತಾಲೂಕಿನಲ್ಲಿ ಈ ರೋಗಕ್ಕೆ ಸಾವನ್ನಪ್ಪಿದ ಮೊದಲ ಪ್ರಕರಣವಾಗಿದೆ. ಈಗಾಗಲೇ 11,000ಕ್ಕೂ ಅಧಿಕ ಜಾನುವಾರುಗಳಿಗೆ ವ್ಯಾಕ್ಸಿನ್ ನೀಡಲಾಗಿದೆ. ಸಿಬ್ಬಂದಿಯ ಕೊರತೆಯಿಂದ ವ್ಯಾಕ್ಸಿನ್ ಕಾರ್ಯ ಕುಂಠಿತಗೊಳ್ಳುತ್ತಿದೆ. ರೈತರು ರೋಗ ಕಂಡುಬಂದ ಜಾನುವಾರನ್ನು ಪ್ರತ್ಯೇಕವಿಟ್ಟು ಔಷಧೋಪಚಾರ ಮಾಡಿದ್ದಲ್ಲಿ ರೋಗ ಹತೋಟಿಗೆ ತರಬಹುದು. ಒಂದೊಮ್ಮೆ ರೋಗದಿಂದ ಜಾನುವಾರು ಸಾವನ್ನಪ್ಪದಲ್ಲಿ ಸ್ಥಳೀಯ ಪಶು ಇಲಾಖೆಗೆ ಮಾಹಿತಿ ನೀಡಿದರೆ ಸರಕಾರದಿಂದ ಸಿಗುವ ಪರಿಹಾರ ದೊರಕಿಸಿಕೊಡಲಾಗುವುದು.”

-ಡಾ. ಶಿವಕುಮಾರ ಪಶು ವೈದ್ಯಾಧಿಕಾರಿ, ಭಟ್ಕಳ

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

1 hour ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

1 hour ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

1 hour ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

16 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago