ಭಟ್ಕಳ, : ತಾಲೂಕಿನ ಮಾರುಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಹೈನುಗಾರ ರೈತರಲ್ಲಿ ಆತಂಕ ಮೂಡಿಸಿದೆ.
ಕಳೆದ ಹತ್ತಾರು ದಿನಗಳಿಂದ ಈ ಭಾಗದ ರೋಗ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಗಣಪತಿ ಹೆಗ್ಡೆ ಎಂಬವರಿಗೆ ಸೇರಿದ ಸುಮಾರು 50 ಸಾವಿರ ರೂ.ಮೌಲ್ಯದ ಗಿರ್ ತಳಿಯ ಆಕಳೊಂದು ರೋಗಬಾಧೆಯಿಂದ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
ಈ ಭಾಗದಲ್ಲಿ ಜಾನುವಾರುಗಳಲ್ಲಿ ರೋಗ ಉಲ್ಬಣಗೊಳ್ಳುತ್ತಿದೆ. ಆದರೆ ಈ ಬಗ್ಗೆ ಸ್ಥಳೀಯ ಪಂಚಾಯತ್ ಆಗಲಿ ಪಶು ಅಧಿಕಾರಿಗಳಾಗಲಿ ರೋಗದ ಬಗ್ಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಹೈನುಗಾರ ರೈತರಿಗೆ ಮಾಹಿತಿ ನೀಡಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದೆ.
“ತಾಲೂಕಿನಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಏರಿಕೆ ಕಾಣುತ್ತಿದ್ದು, ವ್ಯಾಕ್ಸಿನ್ ಕಾರ್ಯ ಭರದಿಂದ ಸಾಗಿದೆ. ತಾಲೂಕಿನಲ್ಲಿ ಈ ರೋಗಕ್ಕೆ ಸಾವನ್ನಪ್ಪಿದ ಮೊದಲ ಪ್ರಕರಣವಾಗಿದೆ. ಈಗಾಗಲೇ 11,000ಕ್ಕೂ ಅಧಿಕ ಜಾನುವಾರುಗಳಿಗೆ ವ್ಯಾಕ್ಸಿನ್ ನೀಡಲಾಗಿದೆ. ಸಿಬ್ಬಂದಿಯ ಕೊರತೆಯಿಂದ ವ್ಯಾಕ್ಸಿನ್ ಕಾರ್ಯ ಕುಂಠಿತಗೊಳ್ಳುತ್ತಿದೆ. ರೈತರು ರೋಗ ಕಂಡುಬಂದ ಜಾನುವಾರನ್ನು ಪ್ರತ್ಯೇಕವಿಟ್ಟು ಔಷಧೋಪಚಾರ ಮಾಡಿದ್ದಲ್ಲಿ ರೋಗ ಹತೋಟಿಗೆ ತರಬಹುದು. ಒಂದೊಮ್ಮೆ ರೋಗದಿಂದ ಜಾನುವಾರು ಸಾವನ್ನಪ್ಪದಲ್ಲಿ ಸ್ಥಳೀಯ ಪಶು ಇಲಾಖೆಗೆ ಮಾಹಿತಿ ನೀಡಿದರೆ ಸರಕಾರದಿಂದ ಸಿಗುವ ಪರಿಹಾರ ದೊರಕಿಸಿಕೊಡಲಾಗುವುದು.”
-ಡಾ. ಶಿವಕುಮಾರ ಪಶು ವೈದ್ಯಾಧಿಕಾರಿ, ಭಟ್ಕಳ
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…