ಭಟ್ಕಳ : ಟೆಂಪೋ ಮತ್ತು ಐರಾವತ ಬಸ್ ಪರಸ್ಪರ ಢಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳದ ತೆರ್ನಮಕ್ಕಿ ಚರ್ಚ್ ಸಂಭವಿಸಿದೆ.
ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್ ಹೊನ್ನಾವರದಿಂದ ಭಟ್ಕಳ ಕಡೆಗೆ ಬರುತ್ತಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಸ್ನ ಮುಂಬದಿ ಸೀಟ್ನಲ್ಲಿ ಕುಳಿತ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಢಿಕ್ಕಿಯ ರಭಸಕ್ಕೆ ಬಸ್ ಮುಂಭಾಗ, ಎಡಭಾಗ ಹಾಗೂ ಟೆಂಪೋ ಹಿಂಭಾಗದಲ್ಲಿ ಭಾರಿ ಹಾನಿಯಾಗಿದೆ.
ಕಾಪು : ಮೂಳೂರು ಕಡಲ ತೀರದಲ್ಲಿ ತೊರಕೆ ಮೀನಿನ ಸುಗ್ಗಿ..
ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಭಟ್ಕಳ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಬಂದು ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.
ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಗೋವಿಂದ ನಾಯ್ಕ ಕೂಡ ಭೇಟಿ ನೀಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…