Featured

ಭಟ್ಕಳ: ಬಾಲಕನ ಅಪಹರಣ ಪ್ರಕರಣ: ಮೂವರ ಬಂಧನ – Vishwanews24

ಭಟ್ಕಳ: ಬಾಲಕನ ಅಪಹರಣ ಪ್ರಕರಣ: ಮೂವರ ಬಂಧನ

ಭಟ್ಕಳದ ಹೆಬಳೆ ನಿವಾಸಿಗಳಾದ ಅಬ್ರಾರ್ ಶೇಖ್ ಹಾಗೂ ಮೊಹಮ್ಮದ್ ಮಂಝೂರ್ ಬಂಧಿತರು..

ಭಟ್ಕಳ: ಪಟ್ಟಣದ ಆಜಾದ್ ನಗರದಿಂದ ಎಂಟು ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಪ್ರಕರಣ ಪ್ರಮುಖ ಆರೋಪಿ, ಬಾಲಕನ ಅಜ್ಜ (ಅಮ್ಮನ ಸೋದರ ಮಾವ) ಇನಾಯತ್ ಉಲ್ಲಾ, ಸೌದಿ ಅರೇಬಿಯಾ ದೇಶದಲ್ಲಿದ್ದಾರೆ.

ಅವರ ಬಗ್ಗೆಯೂ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಬೆಂಗಳೂರು : ವೋಟರ್ ಐಡಿಗೆ ಆಧಾರ್ ನಂಬರ್​​ ಲಿಂಕ್ ಕಡ್ಡಾಯವಲ್ಲ: ಚುನಾವಣಾ ಆಯೋಗ – Vishwanews24

ಸೋಮವಾರ ಬೆಳಿಗ್ಗೆ ಗೋವಾದ ಕಲಂಗುಟ್‌ನಲ್ಲಿ ಬಾಲಕನನ್ನು ಪೊಲೀಸರು ರಕ್ಷಿಸಿ ಪಾಲಕರ ಮಡಿಲು ಸೇರಿಸಿದ್ದರು. ಅಲ್ಲೇ ಸೆರೆಸಿಕ್ಕಿದ್ದ ಆರೋಪಿ ಮಹಮ್ಮದ್ ಅನೀಸ್ ನೀಡಿದ ಮಾಹಿತಿಯ ಪ್ರಕಾರ ಕಾರ್ಯಾಚರಣೆ ಮುಂದುವರಿಸಿದ ಪೊಲೀಸರು ಮತ್ತಿಬ್ಬರನ್ನು ಭಟ್ಕಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಭಟ್ಕಳದ ಹೆಬಳೆ ನಿವಾಸಿಗಳಾದ ಅಬ್ರಾರ್ ಶೇಖ್ ಹಾಗೂ ಮೊಹಮ್ಮದ್ ಮಂಝೂರ್ ಬಂಧಿತರು.ಅಪಹರಣವಾದ ಬಾಲಕನ ತಂದೆ ಹಾಗೂ ಅಜ್ಜನ (ಅಮ್ಮನ ಮಾವ) ಇನಾಯತ್ ಉಲ್ಲಾ ಜೊತೆ ಹಣದ ವ್ಯವಹಾರ ನಡೆದಿತ್ತು. ಹಣ ಮರುಪಾವತಿ ಮಾಡಲು ಒತ್ತಡ ಹೇರುವ ಸಲುವಾಗಿ ಬಾಲಕನನ್ನು ಇನಾಯತ್ ಅಪಹರಣ ಮಾಡಿಸಿದ್ದರು ಎಂದು ವಿಚಾರಣೆಯಲ್ಲಿ ತಿಳಿದುಬಂದಿತ್ತು. ಕೃತ್ಯದಲ್ಲಿ ಒಟ್ಟು ಐವರು ಭಾಗಿಯಾಗಿರುವ ಬಗ್ಗೆ ಮೇಲ್ನೋಟಕ್ಕೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಮೂವರ ಬಂಧನವಾಗಿದ್ದು, ಮತ್ತಿಬ್ಬರಿಗೆ ಕಾರ್ಯಾಚರಣೆ ನಡೆಸಿದ್ದಾರೆ.

ಘಟನೆ ನಡೆದು 30 ಗಂಟೆಗಳ ಒಳಗಾಗಿ ಬಾಲಕನನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಭಟ್ಕಳಕ್ಕೆ ಕರೆತಂದಿರುವುದು ಮತ್ತು ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಟ್ಕಳ: ಬ್ರೆಡ್ ತರಲು ಹೋಗಿ ನಾಪತ್ತೆಯಾಗಿದ್ದ ಬಾಲಕ ಗೋವಾದಲ್ಲಿ ಪತ್ತೆ..

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

2 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

5 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

6 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

6 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

6 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

7 hours ago