ಭಟ್ಕಳ: ತಾಲ್ಲೂಕಿನ ವೆಂಕಟಾಪುರ ಹೊಳೆಯ ಅಳ್ವೆಕೋಡಿಯಲ್ಲಿ ಬುಧವಾರ ಮೀನುಗಾರರ ಬಲೆಗೆ ಸುಮಾರು ಎಂಟು ಅಡಿ ಉದ್ದದ ಮೊಸಳೆಯೊಂದು ಸಿಕ್ಕಿದೆ.
ಅಳ್ವೆಕೋಡಿಯಲ್ಲಿ ಯಶವಂತ ಕೃಷ್ಣ ಮೊಗೇರ ಎಂಬುವವರ ‘ಹರಿ ಓಂ’ ಎಂಬ ದೋಣಿಯ ಮೂಲಕ ಮೀನು ಹಿಡಿಯಲು ಏಂಡಿ ಬಲೆ ಹಾಕಲಾಗಿತ್ತು. ಬಲೆಯನ್ನು ಎಳೆದು ಮೀನುಗಳನ್ನು ತೆಗೆಯಲು ಮೀನುಗಾರರು ಮುಂದಾದಾಗ ಮೀನಿನೊಂದಿಗೆ ಮೊಸಳೆಯೂ ಪತ್ತೆಯಾಯಿತು. ಸಮುದ್ರದ ಅಬ್ಬರ ಹೆಚ್ಚಿರುವ ಕಾರಣ ಹಿನ್ನೀರಿನಲ್ಲಿ ಮೊಸಳೆ ಸಮುದ್ರಕ್ಕೆ ಬಂದಿರಬಹುದು ಎಂದು ಊಹಿಸಲಾಗಿದೆ.
ವಲಯ ಅರಣ್ಯಾಧಿಕಾರಿ ಸವಿತಾ ದೇವಾಡಿಗ ಮತ್ತು ಸಿಬ್ಬಂದಿ, ಮೀನುಗಾರರ ಸಹಾಯದಿಂದ ಮೊಸಳೆಯ ಬಾಯಿಕಟ್ಟಿ ಬೋನಿನಲ್ಲಿ ಹಾಕಿ ಸುರಕ್ಷಿತ ಸ್ಥಳದಲ್ಲಿ ಬಿಟ್ಟರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…