ಭಟ್ಕಳ: ತಡರಾತ್ರಿ ರಂಜಾನ್ ಮಾರುಕಟ್ಟೆಯಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಲು ಹೋದವರೊಂದಿಗೆ ವಾಗ್ವಾದ ಮಾಡುತ್ತಿದ್ದವರನ್ನು ನಿಯಂತ್ರಿಸಲು ಹೋದ ಪೊಲೀಸರನ್ನೇ ತರಾಟೆಗೆ ತೆಗೆದುಕೊಂಡಿದ್ದಲ್ಲದೇ, ಪೊಲೀಸ್ ಜೀಪಿಗೆ ಹಾನಿ ಮಾಡಿರುವ ಕುರಿತು ಭಟ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ತಡರಾತ್ರಿ ಯುವತಿಯೋರ್ವಳಿಗೆ ಕಿರುಕುಳ ನೀಡಿದ್ದಾರೆನ್ನಲಾದ ಹದ್ಲೂರಿನ ಚಂದ್ರು ಸೋಮಯ್ಯ ಗೊಂಡ ಎಂಬವನನ್ನು ಸುತ್ತುವರೆದು ಕೆಲ ಯುವಕರು ಗಲಾಟೆ ಮಾಡುತ್ತಿರುವುದನ್ನು ಕಂಡು ಸ್ಥಳದಲ್ಲಿದ್ದ ಪೊಲೀಸರು ನಿಯಂತ್ರಿಸಲು ಮುಂದಾದರು.
ಈ ಸಮಯದಲ್ಲಿ ಇನ್ನಷ್ಟು ಜನ ಸೇರುತ್ತಿದ್ದಂತೆಯೇ ಪೊಲೀಸರು ಜೀಪಿನಲ್ಲಿ ಆರೋಪಿಯನ್ನು ಹಾಗೂ ಆತನೊಂದಿಗೆ ವಾಗ್ವಾದ ನಡೆಸುತ್ತಿದ್ದ ಮೊಹಮ್ಮದ್ ಮೀರಾನ್ ಎಂಬವನನ್ನು ಕರೆದೊಯ್ಯಲು ಮುಂದಾದಾಗ ಅಲ್ಲಿ ಸೇರಿದ್ದ ಜನರು ಜೀಪನ್ನು ಅಡ್ಡಗಟ್ಟಿದ್ದಲ್ಲದೇ ಕಲ್ಲು ತೂರಾಟ ನಡೆಸಿದ್ದರಿಂದ ಜೀಪಿಗೆ ಹಾನಿಯಾಗಿದೆ ಎನ್ನಲಾಗಿದೆ.
ತಕ್ಷಣ ಜಾಗೃತರಾದ ಪೊಲೀಸರು ಆರೋಪಿಗಳನ್ನು ಠಾಣೆಗೆ ಕರೆ ತಂದು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಐವರು ಹಾಗೂ ಇನ್ನಿತರರ ಮೇಲೆ ಪ್ರಕರಣ ದಾಖಲಿಸಿಕೊಂಡು ರಾತ್ರಿಯೇ ಮೂವರನ್ನು ವಶಕ್ಕೆ ಪಡೆದರು. ನಂತರ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಉಳಿದಂತೆ ಮತ್ತೇ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…