ಭಟ್ಕಳ: ತಡರಾತ್ರಿ ರಂಜಾನ್ ಮಾರುಕಟ್ಟೆಯಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಲು ಹೋದವರೊಂದಿಗೆ ವಾಗ್ವಾದ ಮಾಡುತ್ತಿದ್ದವರನ್ನು ನಿಯಂತ್ರಿಸಲು ಹೋದ ಪೊಲೀಸರನ್ನೇ ತರಾಟೆಗೆ ತೆಗೆದುಕೊಂಡಿದ್ದಲ್ಲದೇ, ಪೊಲೀಸ್ ಜೀಪಿಗೆ ಹಾನಿ ಮಾಡಿರುವ ಕುರಿತು ಭಟ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ತಡರಾತ್ರಿ ಯುವತಿಯೋರ್ವಳಿಗೆ ಕಿರುಕುಳ ನೀಡಿದ್ದಾರೆನ್ನಲಾದ ಹದ್ಲೂರಿನ ಚಂದ್ರು ಸೋಮಯ್ಯ ಗೊಂಡ ಎಂಬವನನ್ನು ಸುತ್ತುವರೆದು ಕೆಲ ಯುವಕರು ಗಲಾಟೆ ಮಾಡುತ್ತಿರುವುದನ್ನು ಕಂಡು ಸ್ಥಳದಲ್ಲಿದ್ದ ಪೊಲೀಸರು ನಿಯಂತ್ರಿಸಲು ಮುಂದಾದರು.
ಈ ಸಮಯದಲ್ಲಿ ಇನ್ನಷ್ಟು ಜನ ಸೇರುತ್ತಿದ್ದಂತೆಯೇ ಪೊಲೀಸರು ಜೀಪಿನಲ್ಲಿ ಆರೋಪಿಯನ್ನು ಹಾಗೂ ಆತನೊಂದಿಗೆ ವಾಗ್ವಾದ ನಡೆಸುತ್ತಿದ್ದ ಮೊಹಮ್ಮದ್ ಮೀರಾನ್ ಎಂಬವನನ್ನು ಕರೆದೊಯ್ಯಲು ಮುಂದಾದಾಗ ಅಲ್ಲಿ ಸೇರಿದ್ದ ಜನರು ಜೀಪನ್ನು ಅಡ್ಡಗಟ್ಟಿದ್ದಲ್ಲದೇ ಕಲ್ಲು ತೂರಾಟ ನಡೆಸಿದ್ದರಿಂದ ಜೀಪಿಗೆ ಹಾನಿಯಾಗಿದೆ ಎನ್ನಲಾಗಿದೆ.
ತಕ್ಷಣ ಜಾಗೃತರಾದ ಪೊಲೀಸರು ಆರೋಪಿಗಳನ್ನು ಠಾಣೆಗೆ ಕರೆ ತಂದು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಐವರು ಹಾಗೂ ಇನ್ನಿತರರ ಮೇಲೆ ಪ್ರಕರಣ ದಾಖಲಿಸಿಕೊಂಡು ರಾತ್ರಿಯೇ ಮೂವರನ್ನು ವಶಕ್ಕೆ ಪಡೆದರು. ನಂತರ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಉಳಿದಂತೆ ಮತ್ತೇ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…