ಭಟ್ಕಳ : ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ಜನಪರ ಯೋಜನೆಗಳಿಂದಲೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗೆದ್ದು ಬಹುಮತ ಪಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಶಯ ವ್ಯಕ್ತಪಡಿಸಿದರು.
ಅವರು ಮಂಗಳವಾರ ಮುರ್ಡೇಶ್ವರದಲ್ಲಿ ಏರ್ಪಡಿಸಿದ್ದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದರು.
ಮುರ್ಡೇಶ್ವರದಲ್ಲಿ ನಡೆದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಮಹತ್ವದ್ದಾಗಿದೆ. ಇಲ್ಲಿಂದಲೇ ಮುಂಬರುವ ಚುನಾವಣೆಯಲ್ಲಿ ಹೆಚ್ಚಿನ ಬಹುಮತ ಪಡೆಯುವ ದೃಢ ಸಂಕಲ್ಪ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದ ಸಾಧನೆ ಕುರಿತು ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿ ಮನೆ ಮನೆಗಳಿಗೆ ತೆರಳಿ ತಿಳಿಸುವ ಕೆಲಸ ಮಾಡಬೇಕು ಎಂದರು.
ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ, ಆಯುಷ್ಮಾನ್ ಭಾರತ ಹಾಗೂ ರಾಜ್ಯ ಸರ್ಕಾರದ ವಿವಿಧ ಜನಪರ ಯೋಜನೆಗಳಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ. ರಾಜ್ಯದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಪರಿಶಿಷ್ಟಪಂಗಡ, ಪರಿಶಿಷ್ಟಜಾತಿ, ಹಿಂದುಳಿದವರು, ರೈತರು, ದಲಿತರು, ಮೀನುಗಾರರು, ನೇಕಾರರು, ಟೈಲರ್ಗಳಿಗೆ ಮಹತ್ವದ ಯೋಜನೆಗಳನ್ನು ಜಾರಿಗೆಗೊಳಿಸಿ ಅನುಕೂಲ ಮಾಡಿಕೊಟ್ಟಿದೆ ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಶಾಸಕರಾದ ದಿನಕರ ಶೆಟ್ಟಿ, ರೂಪಾಲಿ ನಾಯ್ಕ, ಸುನೀಲ ನಾಯ್ಕ ಉಪಸ್ಥಿತರಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ವೆಂಕಟೇಶ ನಾಯಕ ಸ್ವಾಗತಿಸಿದರು. ಶಿವಮೊಗ್ಗದ ಗಿರೀಶ ಪಟೇಲ್ ನಿರ್ವಹಿಸಿದರು. ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಲ್ಮಡಪ್ಪ ವಂದಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…