Featured

ಭದ್ರತಾ ಲೋಪದ ಬಳಿಕ ಸಂಸತ್ತಿಗೆ ಸಿಐಎಸ್ಎಫ್ ಕಾವಲು – vishwanews24

ಭದ್ರತಾ ಲೋಪದ ಬಳಿಕ ಸಂಸತ್ತಿಗೆ ಸಿಐಎಸ್ಎಫ್ ಕಾವಲು

ಹೊಸದಿಲ್ಲಿ: ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ, ದೆಹಲಿ ಮೆಟ್ರೊ ಮತ್ತು ಹೆಚ್ಚು ಜನ ಭೇಟಿ ನೀಡುವ ಸ್ಮಾರಕಗಳು ಸೇರಿದಂತೆ ಇತರ ಪ್ರಮುಖ ಸ್ಥಾವರಗಳಲ್ಲಿ ಪ್ರವೇಶ ನಿಯಂತ್ರಣ, ಶೋಧನೆ ಮತ್ತು ಸ್ಕ್ಯಾನಿಂಗ್ ನಲ್ಲಿ ನೈಪುಣ್ಯ ಹೊಂದಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಇದೀಗ ಸಂಸತ್ತಿನ ಭದ್ರತಾ ಕಾರ್ಯಕ್ಕೆ ನಿಯೋಜನೆಗೊಳ್ಳುವ ಸಾಧ್ಯತೆ ಇದೆ.

ಲೋಕಸಭೆಯ ಸರ್ಪಗಾವಲನ್ನು ಬೇಧಿಸಿ ಪ್ರೇಕ್ಷಕರ ಗ್ಯಾಲರಿಯಿಂದ ಲೋಕಸಭೆ ಚೇಂಬರ್ ಗೆ ಇಬ್ಬರು ವ್ಯಕ್ತಿಗಳು ಹಾರಿದ ಘಟನೆಯ ಬೆನ್ನಲ್ಲೇ ಸಿಐಎಸ್ಎಫ್ ಯೋಧರನ್ನು ನೇಮಿಸುವ ಪ್ರಸ್ತಾವ ಚಾಲನೆ ಪಡೆದಿದೆ.

ಸಂಸತ್ ಆವರಣ ಮತ್ತು ಕಟ್ಟಡಕ್ಕೆ ಸಿಐಎಸ್ಎಫ್ ನ ಭದ್ರತೆ ಮತ್ತು ಅಗ್ನಿಶಾಮಕ ವಿಭಾಗದ ಸಿಬ್ಬಂದಿಯನ್ನು ಖಾಯಂ ಆಗಿ ನಿಯೋಜಿಸುವ ಪ್ರಸ್ತಾವನೆಗೆ ಗೃಹ ವ್ಯವಹಾರಗಳ ಸಚಿವಾಲಯ ತಾತ್ವಿಕ ಒಪ್ಪಿಗೆ ನೀಡಿದೆ. ಈಗಾಗಲೇ 358 ಸಂಸ್ಥೆಗಳಿಗೆ ರಕ್ಷಣಾ ವ್ಯವಸ್ಥೆ ಮತ್ತು ವಿಐಪಿ ಭದ್ರತಾ ವ್ಯವಸ್ಥೆ ಕಲ್ಪಿಸಿರುವ ಸಿಐಎಸ್ಎಫ್ ಮತ್ತು ಗೃಹ ವ್ಯವಹಾರಗಳ ಸಚಿವಾಲಯ ನಡೆಸಿದ ಜಂಟಿ ಸಮೀಕ್ಷೆಯಲ್ಲಿ, ಹಾಲಿ ಇರುವ ಭದ್ರತಾ ಸೌಲಭ್ಯಗಳನ್ನು ಅಂದಾಜಿಸಿ, ಸಮಗ್ರ ಯೋಜನೆಯನ್ನು ಸಿದ್ಧಪಡಿಸಲಿದೆ. ಇದು ಸಿಐಎಸ್ಎಫ್ ನಿಯೋಜನೆಯ ಪೂರ್ವಭಾವಿ ಪ್ರಕ್ರಿಯೆಯಾಗಿರುತ್ತದೆ.

ಸಿಐಎಸ್ಎಫ್ ಭದ್ರತಾ ಯೋಜನೆ ಮತ್ತು ನಿಯೋಜನೆಯ ಅಂತಿಮ ಅನುಮೋದನೆ, ಲೋಕಸಭೆಯ ಭದ್ರತಾ ವ್ಯವಸ್ಥೆಯ ಮೇಲುಸ್ತುವಾರಿ ಹೊಣೆ ಹೊಂದಿರುವ ಲೋಕಸಭಾ ಸೆಕ್ರೆಟ್ರಿಯೇಟ್ ನಿಂದ ದೊರಕಲಿದೆ. ಇದೀಗ ಸಂಸತ್ತಿನ ಭದ್ರತಾ ಸೇವೆಯ ಹೊಣೆ ದೆಹಲಿ ಪೊಲೀಸ್, ಸಿಆರ್ ಪಿಎಫ್ ಮತ್ತು ಪಾರ್ಲಿಮೆಂಟ್ ಡ್ಯೂಟಿ ಗ್ರೂಪ್ ಹೊಂದಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

15 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago