Featured

ಭದ್ರತಾ ಲೋಪದ ಬಳಿಕ ಸಂಸತ್ತಿಗೆ ಸಿಐಎಸ್ಎಫ್ ಕಾವಲು – vishwanews24

ಭದ್ರತಾ ಲೋಪದ ಬಳಿಕ ಸಂಸತ್ತಿಗೆ ಸಿಐಎಸ್ಎಫ್ ಕಾವಲು

ಹೊಸದಿಲ್ಲಿ: ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ, ದೆಹಲಿ ಮೆಟ್ರೊ ಮತ್ತು ಹೆಚ್ಚು ಜನ ಭೇಟಿ ನೀಡುವ ಸ್ಮಾರಕಗಳು ಸೇರಿದಂತೆ ಇತರ ಪ್ರಮುಖ ಸ್ಥಾವರಗಳಲ್ಲಿ ಪ್ರವೇಶ ನಿಯಂತ್ರಣ, ಶೋಧನೆ ಮತ್ತು ಸ್ಕ್ಯಾನಿಂಗ್ ನಲ್ಲಿ ನೈಪುಣ್ಯ ಹೊಂದಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಇದೀಗ ಸಂಸತ್ತಿನ ಭದ್ರತಾ ಕಾರ್ಯಕ್ಕೆ ನಿಯೋಜನೆಗೊಳ್ಳುವ ಸಾಧ್ಯತೆ ಇದೆ.

ಲೋಕಸಭೆಯ ಸರ್ಪಗಾವಲನ್ನು ಬೇಧಿಸಿ ಪ್ರೇಕ್ಷಕರ ಗ್ಯಾಲರಿಯಿಂದ ಲೋಕಸಭೆ ಚೇಂಬರ್ ಗೆ ಇಬ್ಬರು ವ್ಯಕ್ತಿಗಳು ಹಾರಿದ ಘಟನೆಯ ಬೆನ್ನಲ್ಲೇ ಸಿಐಎಸ್ಎಫ್ ಯೋಧರನ್ನು ನೇಮಿಸುವ ಪ್ರಸ್ತಾವ ಚಾಲನೆ ಪಡೆದಿದೆ.

ಸಂಸತ್ ಆವರಣ ಮತ್ತು ಕಟ್ಟಡಕ್ಕೆ ಸಿಐಎಸ್ಎಫ್ ನ ಭದ್ರತೆ ಮತ್ತು ಅಗ್ನಿಶಾಮಕ ವಿಭಾಗದ ಸಿಬ್ಬಂದಿಯನ್ನು ಖಾಯಂ ಆಗಿ ನಿಯೋಜಿಸುವ ಪ್ರಸ್ತಾವನೆಗೆ ಗೃಹ ವ್ಯವಹಾರಗಳ ಸಚಿವಾಲಯ ತಾತ್ವಿಕ ಒಪ್ಪಿಗೆ ನೀಡಿದೆ. ಈಗಾಗಲೇ 358 ಸಂಸ್ಥೆಗಳಿಗೆ ರಕ್ಷಣಾ ವ್ಯವಸ್ಥೆ ಮತ್ತು ವಿಐಪಿ ಭದ್ರತಾ ವ್ಯವಸ್ಥೆ ಕಲ್ಪಿಸಿರುವ ಸಿಐಎಸ್ಎಫ್ ಮತ್ತು ಗೃಹ ವ್ಯವಹಾರಗಳ ಸಚಿವಾಲಯ ನಡೆಸಿದ ಜಂಟಿ ಸಮೀಕ್ಷೆಯಲ್ಲಿ, ಹಾಲಿ ಇರುವ ಭದ್ರತಾ ಸೌಲಭ್ಯಗಳನ್ನು ಅಂದಾಜಿಸಿ, ಸಮಗ್ರ ಯೋಜನೆಯನ್ನು ಸಿದ್ಧಪಡಿಸಲಿದೆ. ಇದು ಸಿಐಎಸ್ಎಫ್ ನಿಯೋಜನೆಯ ಪೂರ್ವಭಾವಿ ಪ್ರಕ್ರಿಯೆಯಾಗಿರುತ್ತದೆ.

ಸಿಐಎಸ್ಎಫ್ ಭದ್ರತಾ ಯೋಜನೆ ಮತ್ತು ನಿಯೋಜನೆಯ ಅಂತಿಮ ಅನುಮೋದನೆ, ಲೋಕಸಭೆಯ ಭದ್ರತಾ ವ್ಯವಸ್ಥೆಯ ಮೇಲುಸ್ತುವಾರಿ ಹೊಣೆ ಹೊಂದಿರುವ ಲೋಕಸಭಾ ಸೆಕ್ರೆಟ್ರಿಯೇಟ್ ನಿಂದ ದೊರಕಲಿದೆ. ಇದೀಗ ಸಂಸತ್ತಿನ ಭದ್ರತಾ ಸೇವೆಯ ಹೊಣೆ ದೆಹಲಿ ಪೊಲೀಸ್, ಸಿಆರ್ ಪಿಎಫ್ ಮತ್ತು ಪಾರ್ಲಿಮೆಂಟ್ ಡ್ಯೂಟಿ ಗ್ರೂಪ್ ಹೊಂದಿದೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

1 day ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

1 day ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

1 day ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

1 day ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

1 day ago