ಹೊಸದಿಲ್ಲಿ: ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ, ದೆಹಲಿ ಮೆಟ್ರೊ ಮತ್ತು ಹೆಚ್ಚು ಜನ ಭೇಟಿ ನೀಡುವ ಸ್ಮಾರಕಗಳು ಸೇರಿದಂತೆ ಇತರ ಪ್ರಮುಖ ಸ್ಥಾವರಗಳಲ್ಲಿ ಪ್ರವೇಶ ನಿಯಂತ್ರಣ, ಶೋಧನೆ ಮತ್ತು ಸ್ಕ್ಯಾನಿಂಗ್ ನಲ್ಲಿ ನೈಪುಣ್ಯ ಹೊಂದಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಇದೀಗ ಸಂಸತ್ತಿನ ಭದ್ರತಾ ಕಾರ್ಯಕ್ಕೆ ನಿಯೋಜನೆಗೊಳ್ಳುವ ಸಾಧ್ಯತೆ ಇದೆ.
ಲೋಕಸಭೆಯ ಸರ್ಪಗಾವಲನ್ನು ಬೇಧಿಸಿ ಪ್ರೇಕ್ಷಕರ ಗ್ಯಾಲರಿಯಿಂದ ಲೋಕಸಭೆ ಚೇಂಬರ್ ಗೆ ಇಬ್ಬರು ವ್ಯಕ್ತಿಗಳು ಹಾರಿದ ಘಟನೆಯ ಬೆನ್ನಲ್ಲೇ ಸಿಐಎಸ್ಎಫ್ ಯೋಧರನ್ನು ನೇಮಿಸುವ ಪ್ರಸ್ತಾವ ಚಾಲನೆ ಪಡೆದಿದೆ.
ಸಂಸತ್ ಆವರಣ ಮತ್ತು ಕಟ್ಟಡಕ್ಕೆ ಸಿಐಎಸ್ಎಫ್ ನ ಭದ್ರತೆ ಮತ್ತು ಅಗ್ನಿಶಾಮಕ ವಿಭಾಗದ ಸಿಬ್ಬಂದಿಯನ್ನು ಖಾಯಂ ಆಗಿ ನಿಯೋಜಿಸುವ ಪ್ರಸ್ತಾವನೆಗೆ ಗೃಹ ವ್ಯವಹಾರಗಳ ಸಚಿವಾಲಯ ತಾತ್ವಿಕ ಒಪ್ಪಿಗೆ ನೀಡಿದೆ. ಈಗಾಗಲೇ 358 ಸಂಸ್ಥೆಗಳಿಗೆ ರಕ್ಷಣಾ ವ್ಯವಸ್ಥೆ ಮತ್ತು ವಿಐಪಿ ಭದ್ರತಾ ವ್ಯವಸ್ಥೆ ಕಲ್ಪಿಸಿರುವ ಸಿಐಎಸ್ಎಫ್ ಮತ್ತು ಗೃಹ ವ್ಯವಹಾರಗಳ ಸಚಿವಾಲಯ ನಡೆಸಿದ ಜಂಟಿ ಸಮೀಕ್ಷೆಯಲ್ಲಿ, ಹಾಲಿ ಇರುವ ಭದ್ರತಾ ಸೌಲಭ್ಯಗಳನ್ನು ಅಂದಾಜಿಸಿ, ಸಮಗ್ರ ಯೋಜನೆಯನ್ನು ಸಿದ್ಧಪಡಿಸಲಿದೆ. ಇದು ಸಿಐಎಸ್ಎಫ್ ನಿಯೋಜನೆಯ ಪೂರ್ವಭಾವಿ ಪ್ರಕ್ರಿಯೆಯಾಗಿರುತ್ತದೆ.
ಸಿಐಎಸ್ಎಫ್ ಭದ್ರತಾ ಯೋಜನೆ ಮತ್ತು ನಿಯೋಜನೆಯ ಅಂತಿಮ ಅನುಮೋದನೆ, ಲೋಕಸಭೆಯ ಭದ್ರತಾ ವ್ಯವಸ್ಥೆಯ ಮೇಲುಸ್ತುವಾರಿ ಹೊಣೆ ಹೊಂದಿರುವ ಲೋಕಸಭಾ ಸೆಕ್ರೆಟ್ರಿಯೇಟ್ ನಿಂದ ದೊರಕಲಿದೆ. ಇದೀಗ ಸಂಸತ್ತಿನ ಭದ್ರತಾ ಸೇವೆಯ ಹೊಣೆ ದೆಹಲಿ ಪೊಲೀಸ್, ಸಿಆರ್ ಪಿಎಫ್ ಮತ್ತು ಪಾರ್ಲಿಮೆಂಟ್ ಡ್ಯೂಟಿ ಗ್ರೂಪ್ ಹೊಂದಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…