ಉಡುಪಿ: ಸಚಿವ ಪ್ರಮೋದ್ ಮಧ್ವರಾಜ್ ಹೆಚ್ಚುವರಿ ಭದ್ರತೆ ಕೋರಿ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ. ಹಾಗಾದ್ರೆ ಸಚಿವ ಪ್ರಮೋದ್ ಮಧ್ವರಾಜ್ ಗೆ ಬೆದರಿಕೆ ಇದ್ಯಾ ಎಂಬ ಪ್ರಶ್ನೆ ಎದ್ದಿದೆ.
ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ಹಿನ್ನಲೆಯಲ್ಲಿ ಕ್ಷೇತ್ರಾದ್ಯಂತ ಪ್ರಚಾರ ಸಭೆಗಳು ಇರುತ್ತದೆ. ಈ ಸಂದರ್ಭದಲ್ಲಿ ಹೆಚ್ಚುವರಿ ಭದ್ರತೆ ನೀಡಬೇಕೆಂದು ಕೋರಿದ್ದೇನೆ. ಗೃಹ ಇಲಾಖೆಯಲ್ಲಿ ಏನು ಬೆಳವಣಿಗೆಯಾಗಿದೆಯೆಂದು ಗೊತ್ತಿಲ್ಲ ಅಂತ ಹೇಳಿದ್ರು.
ಸಂಭವನೀಯ ಅನಾಹುತ ತಪ್ಪಿಸಲು ಹೆಚ್ಚುವರಿ ಭದ್ರತೆ ಕೋರಿ ಪತ್ರ ಬರೆದಿದ್ದೇನೆ. ಅವಘಡ ಆಗದಿರಲಿ ಎಂದು ಮುನ್ನಚ್ಚರಿಕಾ ದೃಷ್ಟಿಯಿಂದ ಪತ್ರ ಬರೆಯಲಾಗಿದೆ ಅಂದ್ರು.
ಗೃಹ ಇಲಾಖೆಯಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಭದ್ರತೆ ಕೊಡೋದು ಬಿಡೋದು ಸರ್ಕಾರಕ್ಕೆ ಬಿಟ್ಟದ್ದು. ಯಾವ ಕಾರಣಕ್ಕೆ ಭದ್ರತೆ ಬೇಕು ಅಂತ ಸಚಿವರು ಪತ್ರದಲ್ಲಿ ಯಾವುದೇ ಕಾರಣ ಕೊಟ್ಟಿಲ್ಲ. ಮುನ್ನಚ್ಚೆರಿಕೆಗೆ ಎಂದಷ್ಟೇ ಬರೆದಿದ್ದಾರೆ. ಸಚಿವರಿಗೇನಾದ್ರು ಬೆದರಿಕೆ ಇದ್ಯಾ, ಅಥವಾ ನೂರಾರು ಕೋಟಿ ರೂಪಾಯಿ ಒಡೆಯನಿಗೆ ಏನಾದ್ರು ಆಪತ್ತು ಎದುರಾಗಿದ್ಯಾ ಅನ್ನುವ ಪ್ರಶ್ನೆಗಳನ್ನು ಉಡುಪಿ ಜನತೆ ಕೇಳುತ್ತಿದ್ದಾರೆ. ಬಗ್ಗೆ ಸಚಿವರು ಉತ್ತರ ಕೊಡದೆ ನಕ್ಕು, ಸುಮ್ಮನಾಗಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…