Featured

ಭಯೋತ್ಪಾದಕರು ದೇಶದಲ್ಲಿ ಅಟ್ಟಹಾಸ ಮೆರೆಯುವಾಗ ನಪುಂಸಕರಂತೆ ವರ್ತಿಸಿದ್ದು ಕಾಂಗ್ರೆಸ್‌ : ಸುನಿಲ್‌ಕುಮಾರ್‌ -Vishwanews24

ಕಾಶ್ಮೀರದಲ್ಲಿ ರಾಷ್ಟ್ರ ಧ್ವಜ ಹಾರಿಸಲು, ದೇಶದ ಗಡಿ ರಕ್ಷಿಸಲು ಮತ್ತು ಭಯೋತ್ಪಾದಕರ ಹುಟ್ಟಡಗಿಸಲು ಆರ್‌ಎಸ್‌ಎಸ್‌ನ ಮೋದಿ ಬರಬೇಕಾಯಿತು

ಬೆಂಗಳೂರು: ಹುಬ್ಬಳ್ಳಿ ಮತ್ತು ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸಲು ಬಿಡದೇ ನಪುಂಸಕರಾಗಿ ವರ್ತಿಸಿದ್ದು ಕಾಂಗ್ರೆಸ್‌ ನಾಯಕರು ಎಂದು ಇಂಧನ ಸಚಿವ ವಿ.ಸುನಿಲ್‌ಕುಮಾರ್‌ ಕಿಡಿಕಾರಿದ್ದಾರೆ.

ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಇತರ ನಾಯಕರು ಮಾನಸಿಕ ವೇದನೆಗೆ ಒಳಗಾದಂತೆ ವರ್ತಿಸುತ್ತಿದ್ದಾರೆ. ಮೋದಿ ಮತ್ತು ಬೊಮ್ಮಾಯಿ ಅವರ ಜನಪರ ಆಡಳಿತವನ್ನು ಸಹಿಸದೇ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಭಯೋತ್ಪಾದಕರ ಮುಂದೆ ಮಂಡಿಯೂರಿದ್ದು ಕಾಂಗ್ರೆಸ್‌ ನಾಯಕರು. ಭಯೋತ್ಪಾದಕರು ದೇಶದಲ್ಲಿ ಅಟ್ಟಹಾಸ ಮೆರೆಯುವಾಗ ನಪುಂಸಕರಂತೆ ವರ್ತಿಸಿದ್ದು ಕಾಂಗ್ರೆಸ್‌ ಅಲ್ಲವೇ? ಆರ್‌ಎಸ್‌ಎಸ್‌ನ ಮೋದಿ ಬಂದ ಬಳಿಕ ಭಯೋತ್ಪಾದಕರನ್ನು ಬಗ್ಗು ಬಡಿಯಲಿಲ್ಲವೆ ಎಂದು ಪ್ರಶ್ನಿಸಿದರು.

ಕಾಶ್ಮೀರದ ಶ್ರೀನಗರದಲ್ಲಿ ರಾಷ್ಟ್ರಧ್ವಜ ಹಾರಿಸಲು ಸಾಧ್ಯವಾಗಿದ್ದು ಮೋದಿ ಪ್ರಧಾನಿ ಆದ ಬಳಿಕ. ಕಾಂಗ್ರೆಸ್‌ ನಾಯಕರು ನಪುಂಸಕರಾಗಿದ್ದರಿಂದಲೇ ಅಲ್ಲಿ ರಾಷ್ಟ್ರ ಧ್ವಜ ಹಾರಿಸಲು ಬಿಡಲಿಲ್ಲ. ಆದ್ದರಿಂದ ಕಾಂಗ್ರೆಸ್‌ಗೆ ರಾಷ್ಟ್ರಧ್ವಜದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ ಎಂದೂ ಸುನಿಲ್‌ ತಿಳಿಸಿದರು.

ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಎಂದೂ ಆಡಳಿತ ಮತ್ತು ನಡವಳಿಕೆಯಲ್ಲಿ ದೇಶದ ಹಿತ ಕಾಯುವ ರೀತಿಯಲ್ಲಿ ನಡೆದು ಕೊಳ್ಳಲಿಲ್ಲ. ಕಾಶ್ಮೀರದಲ್ಲಿ ರಾಷ್ಟ್ರ ಧ್ವಜ ಹಾರಿಸಲು, ದೇಶದ ಗಡಿ ರಕ್ಷಿಸಲು ಮತ್ತು ಭಯೋತ್ಪಾದಕರ ಹುಟ್ಟಡಗಿಸಲು ಆರ್‌ಎಸ್‌ಎಸ್‌ನ ಮೋದಿ ಬರಬೇಕಾಯಿತು ಎಂದು ಹೇಳಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

2 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

2 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

4 hours ago