ನವದೆಹಲಿ, : ಈ ವರ್ಷದ ಅಕ್ಟೋವರ್ ತಿಂಗಳ ಒಳಗೆ ದೇಶದಲ್ಲಿ ಚಟುವಟಿಕೆ ನಡೆಸುತ್ತಿರುವ ಭಯೋತ್ಪಾದನಾ ಸಂಘಟನೆಗಳನ್ನು ಮಟ್ಟ ಹಾಕಬೇಕು ಎಂದು ಅಂತಾರಾಷ್ಟ್ರೀಯ ಮಟ್ಟದ ಹಣಕಾಸು ಕಾರ್ಯಪಡೆ (ಎಫ್ಎಟಿಎಫ್) ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದೆ.
ವಿಶ್ವಸಂಸ್ಥೆ ಪಟ್ಟಿಮಾಡಿರುವ ಭಯೋತ್ಪಾದಕರ ವಿರುದ್ಧ ಕ್ರಮ ತೆಗೆದುಕೊಳ್ಳದೆ ಇದ್ದರೆ ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸಬೇಕಾಗುತ್ತದೆ ಎಂದು ತೀಕ್ಷ್ಣ ಎಚ್ಚರಿಕೆ ರವಾನಿಸಿದೆ.
ಪಾಕಿಸ್ತಾನವನ್ನು ಜಾಗತಿಕ ಕಾವಲುನಾಯಿ ಈಗಾಗಲೇ ‘ಬೂದು ಪಟ್ಟಿ’ಗೆ ಸೇರಿಸಿದೆ. ಅಕ್ರಮ ಹಣವರ್ಗಾವಣೆ ಮತ್ತು ಭಯೋತ್ಪಾದನೆಗೆ ಹಣಕಾಸು ಪೂರೈಕೆಯನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣಕ್ಕೆ ಪಾಕಿಸ್ತಾನದ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಪಾಕಿಸ್ತಾನವನ್ನು ಕಪ್ಪುಪಟ್ಟಿಗೆ ಸೇರಿಸಿದರೆ ಆ ದೇಶವು ಜಾಗತಿಕ ನಿರ್ಬಂಧನೆಗೆ ಒಳಪಡಬೇಕಾಗುತ್ತದೆ.
ಇದರಿಂದ ಅದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಸೇರಿದಂತೆ ಯಾವುದೇ ಜಾಗತಿಕ ಸಂಸ್ಥೆಗಳು ಹಾಗೂ ದೇಶಗಳಿಂದ ಆರ್ಥಿಕ ನೆರವನ್ನು ಪಡೆದುಕೊಳ್ಳದ ಸ್ಥಿತಿಗೆ ತಲುಪಲಿದೆ.
ಪಾಕಿಸ್ತಾನದ ನೆಲೆಯಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಸಕ್ರಿಯವಾಗಿದ್ದು, ಅದನ್ನು ತಡೆಯುವ ಕಾರ್ಯ ನಡೆಯುತ್ತಿಲ್ಲ. ಅಂತಾರಾಷ್ಟ್ರೀಯ ಸಂಸ್ಥೆ ನಿಗದಿಪಡಿಸಿದ ಗುಣಮಟ್ಟದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ದೂರಿದ್ದವು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…