ನವದೆಹಲಿ,: ಭಯೋತ್ಪಾದನಾ ಹೋರಾಟದಲ್ಲಿ ಕೇಂದ್ರ ಸರ್ಕಾರ ಯಾವುದೇ ರೀತಿಯ ನಿರ್ಧಾರ ಕೈಗೊಂಡರೆ ಅದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು. ಇದರಲ್ಲಿ ಯಾವುದೇ ರೀತಿಯ ರಾಜಕೀಯ ಚರ್ಚೆ ಬೇಡ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ತಾಯ್ನಾಡಿಗಾಗಿ 40 ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಾವು ರಾಜಕೀಯ ಬೆರೆಸದೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಬೆಂಬಲ ನೀಡಲಿದ್ದೇವೆ. ಕೆಲವು ದಿನಗಳವರೆಗೂ ಈ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಗುಲಾಂ ನಬಿ ಆಜಾದ್ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಜಮ್ಮುಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪುರದಲ್ಲಿ ಸಿಆರ್ಪಿಎಫ್ ಯೋಧರ ವಾಹನದ ಮೇಲೆ ಉಗ್ರರು ನಡೆಸಿರುವ ದಾಳಿಯನ್ನು ತೀವ್ರವಾಗಿ ಖಂಡಿಸಿದರು.
ವೀರಯೋಧರು ಹುತಾತ್ಮರಾಗಿರುವುದಕ್ಕೆ ಕಂಬನಿ ಮಿಡಿದ ಅವರು, ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಲೇಬೇಕು. ನಮ್ಮ ಯೋಧರ ಹೋರಾಟ ವ್ಯರ್ಥವಾಗಬಾರದು. ಕೇಂದ್ರ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳುವಂತೆ ಮನವಿ ಮಾಡಿದರು.
ನಾನು ಈ ವಿಷಯದಲ್ಲಿ ರಾಜಕಾರಣ ಮಾಡುವುದಾಗಲಿ, ಇಲ್ಲವೇ ಬೇರೊಬ್ಬರನ್ನು ಟೀಕಿಸುವ ಹಂತಕ್ಕೆ ಇಳಿಯುವುದಿಲ್ಲ. ಈ ಸಮಯದಲ್ಲಿ ನಮಗೆ ದೇಶದ ಭದ್ರತೆ ಮುಖ್ಯ. ನಾವು ಪ್ರೀತಿ ಮತ್ತು ವಿಶ್ವಾಸದಿಂದ ದೇಶವನ್ನು ಕಟ್ಟಿದ್ದೇವೆ. ನಮಗೆ ಶಾಂತಿ ಮುಖ್ಯ ಹೊರತು ಅಶಾಂತಿಯನ್ನೂ ಎಂದೂ ಬಯಸುವುದಿಲ್ಲ ಎಂದರು.
ಭಯೋತ್ಪಾದನೆಯನ್ನು ಪ್ರತಿಯೊಬ್ಬರೂ ಖಂಡಿಸಬೇಕು. ಮನುಕುಲದ ಶಾಂತಿಗೆ ಇದೊಂದು ಪಿಡುಗಾಗಿ ಪರಿಣಮಿಸಿದೆ. ಬೇರು ಸಮೇತ ಇದನ್ನು ಕಿತ್ತು ಹಾಕಲೇಬೇಕು. ಘಟನೆಗೆ ಕಾರಣರಾದವರನ್ನು ಕಾನೂನಿನ ಪ್ರಕಾರವೇ ಶಿಕ್ಷಿಸಬೇಕು.
ವೀರ ಯೋಧರ ಕುಟುಂಬದವರ ಜೊತೆ ದೇಶವೇ ನಿಲ್ಲಲಿದೆ. ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರವನ್ನು ನಾವು ಬೆಂಬಲಿಸುತ್ತೇವೆ ಎಂದು ಹೇಳಿದರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…