ನವದೆಹಲಿ: ಭಯೋತ್ಪಾದನೆ ಹಾಗೂ ತೀವ್ರಗಾಮಿತನ ಸರ್ವವ್ಯಾಪಿಯಾಗಿದ್ದು, ಇವುಗಳನ್ನು ಎದುರಿಸಲು ಭಾರತ ಹಾಗೂ ನೆರೆ ದೇಶಗಳಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಭರವಸೆ ನೀಡಿದ್ದಾರೆ.
ಪಾಕಿಸ್ತಾನ ಪ್ರವಾಸ ಮುಗಿಸಿ ಮಂಗಳವಾರ ರಾತ್ರಿ ಭಾರತಕ್ಕೆ ಆಗಮಿಸಿದ ಮೊಹಮ್ಮದ್ ಬಿನ್ ಸಲ್ಮಾನ್ ಬುಧವಾರ ಮೋದಿ ಜತೆ ವಿಸ್ತೃತ ಮಾತುಕತೆ ನಡೆಸಿದರು. ವ್ಯಾಪಾರ ಹಾಗೂ ಹೂಡಿಕೆ ವಲಯಗಳಲ್ಲಿ ಸಹಕಾರ ವೃದ್ಧಿಸುವುದಕ್ಕೆ ಸಂಬಂಧಿಸಿದಂತೆ 5 ಒಪ್ಪಂದಗಳಿಗೆ ಇದೇ ವೇಳೆ ಎರಡೂ ದೇಶಗಳು ಸಹಿ ಹಾಕಿದವು.
ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋದಿ, ಸೌದಿ ಅರೇಬಿಯಾದೊಂದಿಗೆ ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸುವ ಸಂಬಂಧ ಮಾತುಕತೆ ನಡೆಸಲಾಯಿತು. ರಕ್ಷಣಾ ವಲಯದಲ್ಲಿ ಪರಸ್ಪರ ಸಹಕಾರಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಸಂಬಂಧ ಸಾಕಷ್ಟು ಗಟ್ಟಿಗೊಂಡಿದೆ. ಭಾರತದ ಮೂಲಸೌಕರ್ಯ ವಲಯದಲ್ಲಿ ಸೌದಿ ಅರೇಬಿಯಾ ಹೂಡಿಕೆ ಮಾಡಲು ಒಪ್ಪಿಗೆ ಸೂಚಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು.
ಮಾತುಕತೆ ಬಳಿಕ ಮಾಧ್ಯಮ ಹೇಳಿಕೆಯೊಂದನ್ನು ಸೌದಿ ರಾಜಕುಮಾರ ಬಿಡುಗಡೆ ಮಾಡಿದ್ದಾರೆ. ಭಯೋತ್ಪಾದನೆ ಹಾಗೂ ತೀವ್ರಗಾಮಿತನಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಎಲ್ಲ ಸಹಕಾರ ನೀಡುತ್ತೇವೆ. ಅದು ಗುಪ್ತಚರ ಮಾಹಿತಿ ವಿನಿಮಯ ಕೂಡ ಆಗಿರಬಹುದು. ಆದರೆ ಭಾರತವೊಂದರ ಜತೆಗೇ ಅಲ್ಲ, ನೆರೆ ದೇಶಗಳಿಗೂ ಸಹಾಯ ಮಾಡುತ್ತೇವೆ ಎಂದು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…