Featured

ಭಯೋತ್ಪಾದನೆ ಎದುರಿಸಲು, ಉಗ್ರರ ವಿರುದ್ಧದ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ : ಸೌದಿ ಅರೇಬಿಯಾ – Vishwanews24

ನವದೆಹಲಿ: ಭಯೋತ್ಪಾದನೆ ಹಾಗೂ ತೀವ್ರಗಾಮಿತನ ಸರ್ವವ್ಯಾಪಿಯಾಗಿದ್ದು, ಇವುಗಳನ್ನು ಎದುರಿಸಲು ಭಾರತ ಹಾಗೂ ನೆರೆ ದೇಶಗಳಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಭರವಸೆ ನೀಡಿದ್ದಾರೆ.

ಪಾಕಿಸ್ತಾನ ಪ್ರವಾಸ ಮುಗಿಸಿ ಮಂಗಳವಾರ ರಾತ್ರಿ ಭಾರತಕ್ಕೆ ಆಗಮಿಸಿದ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಬುಧವಾರ ಮೋದಿ ಜತೆ ವಿಸ್ತೃತ ಮಾತುಕತೆ ನಡೆಸಿದರು. ವ್ಯಾಪಾರ ಹಾಗೂ ಹೂಡಿಕೆ ವಲಯಗಳಲ್ಲಿ ಸಹಕಾರ ವೃದ್ಧಿಸುವುದಕ್ಕೆ ಸಂಬಂಧಿಸಿದಂತೆ 5 ಒಪ್ಪಂದಗಳಿಗೆ ಇದೇ ವೇಳೆ ಎರಡೂ ದೇಶಗಳು ಸಹಿ ಹಾಕಿದವು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋದಿ, ಸೌದಿ ಅರೇಬಿಯಾದೊಂದಿಗೆ ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸುವ ಸಂಬಂಧ ಮಾತುಕತೆ ನಡೆಸಲಾಯಿತು. ರಕ್ಷಣಾ ವಲಯದಲ್ಲಿ ಪರಸ್ಪರ ಸಹಕಾರಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಸಂಬಂಧ ಸಾಕಷ್ಟು ಗಟ್ಟಿಗೊಂಡಿದೆ. ಭಾರತದ ಮೂಲಸೌಕರ್ಯ ವಲಯದಲ್ಲಿ ಸೌದಿ ಅರೇಬಿಯಾ ಹೂಡಿಕೆ ಮಾಡಲು ಒಪ್ಪಿಗೆ ಸೂಚಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು.

ಮಾತುಕತೆ ಬಳಿಕ ಮಾಧ್ಯಮ ಹೇಳಿಕೆಯೊಂದನ್ನು ಸೌದಿ ರಾಜಕುಮಾರ ಬಿಡುಗಡೆ ಮಾಡಿದ್ದಾರೆ. ಭಯೋತ್ಪಾದನೆ ಹಾಗೂ ತೀವ್ರಗಾಮಿತನಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಎಲ್ಲ ಸಹಕಾರ ನೀಡುತ್ತೇವೆ. ಅದು ಗುಪ್ತಚರ ಮಾಹಿತಿ ವಿನಿಮಯ ಕೂಡ ಆಗಿರಬಹುದು. ಆದರೆ ಭಾರತವೊಂದರ ಜತೆಗೇ ಅಲ್ಲ, ನೆರೆ ದೇಶಗಳಿಗೂ ಸಹಾಯ ಮಾಡುತ್ತೇವೆ ಎಂದು ಹೇಳಿದರು.

 

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

1 day ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago