Featured

ಭಯೋತ್ಪಾದನೆ ಎದುರಿಸಲು, ಉಗ್ರರ ವಿರುದ್ಧದ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ : ಸೌದಿ ಅರೇಬಿಯಾ – Vishwanews24

ನವದೆಹಲಿ: ಭಯೋತ್ಪಾದನೆ ಹಾಗೂ ತೀವ್ರಗಾಮಿತನ ಸರ್ವವ್ಯಾಪಿಯಾಗಿದ್ದು, ಇವುಗಳನ್ನು ಎದುರಿಸಲು ಭಾರತ ಹಾಗೂ ನೆರೆ ದೇಶಗಳಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಭರವಸೆ ನೀಡಿದ್ದಾರೆ.

ಪಾಕಿಸ್ತಾನ ಪ್ರವಾಸ ಮುಗಿಸಿ ಮಂಗಳವಾರ ರಾತ್ರಿ ಭಾರತಕ್ಕೆ ಆಗಮಿಸಿದ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಬುಧವಾರ ಮೋದಿ ಜತೆ ವಿಸ್ತೃತ ಮಾತುಕತೆ ನಡೆಸಿದರು. ವ್ಯಾಪಾರ ಹಾಗೂ ಹೂಡಿಕೆ ವಲಯಗಳಲ್ಲಿ ಸಹಕಾರ ವೃದ್ಧಿಸುವುದಕ್ಕೆ ಸಂಬಂಧಿಸಿದಂತೆ 5 ಒಪ್ಪಂದಗಳಿಗೆ ಇದೇ ವೇಳೆ ಎರಡೂ ದೇಶಗಳು ಸಹಿ ಹಾಕಿದವು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋದಿ, ಸೌದಿ ಅರೇಬಿಯಾದೊಂದಿಗೆ ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸುವ ಸಂಬಂಧ ಮಾತುಕತೆ ನಡೆಸಲಾಯಿತು. ರಕ್ಷಣಾ ವಲಯದಲ್ಲಿ ಪರಸ್ಪರ ಸಹಕಾರಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಸಂಬಂಧ ಸಾಕಷ್ಟು ಗಟ್ಟಿಗೊಂಡಿದೆ. ಭಾರತದ ಮೂಲಸೌಕರ್ಯ ವಲಯದಲ್ಲಿ ಸೌದಿ ಅರೇಬಿಯಾ ಹೂಡಿಕೆ ಮಾಡಲು ಒಪ್ಪಿಗೆ ಸೂಚಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು.

ಮಾತುಕತೆ ಬಳಿಕ ಮಾಧ್ಯಮ ಹೇಳಿಕೆಯೊಂದನ್ನು ಸೌದಿ ರಾಜಕುಮಾರ ಬಿಡುಗಡೆ ಮಾಡಿದ್ದಾರೆ. ಭಯೋತ್ಪಾದನೆ ಹಾಗೂ ತೀವ್ರಗಾಮಿತನಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಎಲ್ಲ ಸಹಕಾರ ನೀಡುತ್ತೇವೆ. ಅದು ಗುಪ್ತಚರ ಮಾಹಿತಿ ವಿನಿಮಯ ಕೂಡ ಆಗಿರಬಹುದು. ಆದರೆ ಭಾರತವೊಂದರ ಜತೆಗೇ ಅಲ್ಲ, ನೆರೆ ದೇಶಗಳಿಗೂ ಸಹಾಯ ಮಾಡುತ್ತೇವೆ ಎಂದು ಹೇಳಿದರು.

 

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

8 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

10 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

10 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

10 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

10 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

10 hours ago