ನವದೆಹಲಿ : ಪಾಕಿಸ್ತಾನ ಉಗ್ರರನ್ನು ಮುಂದೆಯೂ ಬೆಂಬಲಿಸುತ್ತಿದ್ದರೆ ಭಾರತದಿಂದ ಪಾಕಿಸ್ತಾನಕ್ಕೆ ಹರಿಯುವ ನೀರನ್ನು ನಿಲ್ಲಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಕಿಡಿ ಕಾರಿದ್ದಾರೆ.
ಪಾಕಿಸ್ತಾನಕ್ಕೆ ಭಾರತದಿಂದ ಮೂರು ನದಿಗಳು ಹರಿಯುತ್ತವೆ. ಅದನ್ನು ಸ್ಥಗಿತ ಮಾಡಲು ನಮಗೆ ಇಷ್ಟವಿಲ್ಲ. ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ನೀರಿನ ಒಪ್ಪಂದ ಶಾಂತಯುತವಾಗಿ ಮತ್ತು ಸ್ನೇಹದಿಂದ ಇರಬೇಕಾಗಿತ್ತು. ಆದರೆ ಅದು ಸಂಪೂರ್ಣವಾಗಿ ಅಳಿಸಿ ಹೋಗಿದೆ. ಆದುದರಿಂದ ನಾವು ಕೂಡ ಈ ಒಪ್ಪಂದವನ್ನು ಪಾಲಿಸುವುದಿಲ್ಲ ಎಂದು ಗಡ್ಕರಿ ಹೇಳಿದ್ದಾರೆ.
ಅಲ್ಲದೆ ಪಾಕಿಸ್ತಾನ ನಿರಂತರವಾಗಿ ಉಗ್ರರನ್ನು ಬೆಂಬಲಿಸಿಕೊಂಡು ಬಂದಿದೆ. ಅದು ಭಯೋತ್ಪಾದನೆಯನ್ನು ನಿಲ್ಲಿಸುವುದೇ ಇಲ್ಲ.ಹೀಗೆ ಮುಂದುವರೆದರೆ ಪಾಕ್ ಗೆ ಹರಿಯುವ ನೀರನ್ನು ಸ್ಥಗಿತ ಮಾಡುವುದಲ್ಲದೆ, ನಮಗೆ ಬೇರೆ ಆಯ್ಕೆಗಳಿಲ್ಲ. ಈ ಬಗ್ಗೆ ಭಾರತ ಅಧ್ಯಯನ ನಡೆಸುತ್ತಿದೆ. ಈ ನೀರು ಹರಿಯಾಣ, ಪಂಜಾಬ್ ಮತ್ತು ರಾಜಸ್ಥಾನಕ್ಕೆ ಹರಿಯುವಂತೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…