ನವದೆಹಲಿ: ಭಯೋತ್ಪಾದನೆ ನಿಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ ಎಂಬ ವಿಶ್ಲೇಷಣೆಗಳ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಹೇಳಿ ಇದೀಗ ಸದ್ದು ಮಾಡಿದೆ.
ಪಾಕಿಸ್ತಾನ ಮತ್ತು ಭಯೋತ್ಪಾದನೆ ವಿರುದ್ಧ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಕಟುವಾದ ನಿಲುವು ತೆಗೆದುಕೊಂಡಿರಲಿಲ್ಲ ಎಂಬುದನ್ನು ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ದೆಹಲಿ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶೀಲಾ ದೀಕ್ಷಿತ್ ಅವರು ಒಪ್ಪಿಕೊಂಡಿದ್ದಾರೆ.
ಸಿಎನ್ಎನ್-ನ್ಯೂಸ್-18 ಸಂದರ್ಶನದಲ್ಲಿ ಮಾತನಾಡಿದ ಶೀಲಾ ದೀಕ್ಷಿತ್ ಅವರು, ‘ಪಾಕಿಸ್ತಾನ ಮತ್ತು ಭಯೋತ್ಪಾದನೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರಂತೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಕಠಿಣ ನಿಲುವು ತಾಳಿರಲಿಲ್ಲ,’ ಎಂದರು. ಆದರೆ, ಮೋದಿ ಅವರು ರಾಜಕೀಯ ಲಾಭಕ್ಕಾಗಿ ಇದನ್ನೆಲ್ಲ ಮಾಡಿದ್ದಾರೆ ಎಂದು ಇದೇ ವೇಳೆ ಅವರು ಟೀಕಿಸಿದರು.
“ಇಡೀ ದೇಶಕ್ಕೂ ಗೊತ್ತಿರುವ ಸತ್ಯವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಒಪ್ಪಿಕೊಳ್ಳದಿದ್ದರೂ, ಅದನ್ನು ಪುನರುಚ್ಚರಿಸಿದ ಶೀಲಾ ದೀಕ್ಷಿತ್ ಅವರಿಗೆ ನನ್ನ ಧನ್ಯವಾದಗಳು” ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…