ನವದೆಹಲಿ: ಭಯೋತ್ಪಾದನೆ ನಿಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ ಎಂಬ ವಿಶ್ಲೇಷಣೆಗಳ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಹೇಳಿ ಇದೀಗ ಸದ್ದು ಮಾಡಿದೆ.
ಪಾಕಿಸ್ತಾನ ಮತ್ತು ಭಯೋತ್ಪಾದನೆ ವಿರುದ್ಧ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಕಟುವಾದ ನಿಲುವು ತೆಗೆದುಕೊಂಡಿರಲಿಲ್ಲ ಎಂಬುದನ್ನು ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ದೆಹಲಿ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶೀಲಾ ದೀಕ್ಷಿತ್ ಅವರು ಒಪ್ಪಿಕೊಂಡಿದ್ದಾರೆ.
ಸಿಎನ್ಎನ್-ನ್ಯೂಸ್-18 ಸಂದರ್ಶನದಲ್ಲಿ ಮಾತನಾಡಿದ ಶೀಲಾ ದೀಕ್ಷಿತ್ ಅವರು, ‘ಪಾಕಿಸ್ತಾನ ಮತ್ತು ಭಯೋತ್ಪಾದನೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರಂತೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಕಠಿಣ ನಿಲುವು ತಾಳಿರಲಿಲ್ಲ,’ ಎಂದರು. ಆದರೆ, ಮೋದಿ ಅವರು ರಾಜಕೀಯ ಲಾಭಕ್ಕಾಗಿ ಇದನ್ನೆಲ್ಲ ಮಾಡಿದ್ದಾರೆ ಎಂದು ಇದೇ ವೇಳೆ ಅವರು ಟೀಕಿಸಿದರು.
“ಇಡೀ ದೇಶಕ್ಕೂ ಗೊತ್ತಿರುವ ಸತ್ಯವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಒಪ್ಪಿಕೊಳ್ಳದಿದ್ದರೂ, ಅದನ್ನು ಪುನರುಚ್ಚರಿಸಿದ ಶೀಲಾ ದೀಕ್ಷಿತ್ ಅವರಿಗೆ ನನ್ನ ಧನ್ಯವಾದಗಳು” ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…