ನವದೆಹಲಿ: ಶ್ರೀಲಂಕಾದಲ್ಲಿ ಭದ್ರತಾ ದೃಷ್ಟಿಯಿಂದ ಬುರ್ಖಾ ನಿಷೇಧ ಮಾಡಿದ ಬೆನ್ನಲ್ಲೇ, ಭಾರತದಲ್ಲೂ ಬುರ್ಖಾ ನಿಷೇಧ ಮಾಡಬೇಕು ಎಂದು ಶಿವಸೇನೆ ಒತ್ತಾಯಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಒವೈಸಿ, ಉಡುಗೆಗಳಿಗೆ ನಿಷೇಧ ವಿಧಿಸಿ ಭಯೋತ್ಪಾದನೆ ವಿರುದ್ಧ ಹೋರಾಡುವುದರ ಬದಲು ಮನಸ್ಥಿತಿ ಬದಲಾಗಬೇಕಿದೆ ಎಂದಿದ್ದಾರೆ.
ಬುರ್ಖಾ ಅವರವರ ಆಯ್ಕೆ ಎಂದು ಸುಪ್ರೀಂಕೋರ್ಟ್ ತೀರ್ಪನ್ನು ಶಿವಸೇನೆ ಓದಿಕೊಳ್ಳಲಿ. ನಿಮಗೆ ಏನು ಇಷ್ಟವೋ ಅದನ್ನು ಧರಿಸಬಹುದು, ಅದು ಬುರ್ಖಾ ಆಗಿರಬಹುದು, ಜೀನ್ಸ್ ಆಗಿರಬಹುದು. ಇಲ್ಲಿ ಆಯ್ಕೆ ಇದೆ. ಅದು ನಮ್ಮ ಮೂಲಭೂತ ಹಕ್ಕು ಕೂಡಾ ಆಗಿದೆ ಎಂದಿದ್ದಾರೆ ಒವೈಸಿ.
ಮೋದಿಯನ್ನು ಪರಾಭವಗೊಳಿಸುತ್ತೇವೆ ಎಂದು ಶಿವಸೇನೆ ಈ ಹಿಂದೆ ಸಿಕ್ಕಾಪಟ್ಟೆ ಬರೆದಿತ್ತು. ಆದರೆ ಇವತ್ತು ಅವರೆಲ್ಲರೂ ಜತೆಯಾಗಿದ್ದಾರೆ. ಶಿವಸೇನೆ ಅಸಂಬದ್ಧವಾಗಿ ಮಾತನಾಡುತ್ತಿದೆ. ಕಾನೂನು ಚೌಕಟ್ಟುಗಳನ್ನು ಶಿವಸೇನೆ ಅರ್ಥ ಮಾಡಿಕೊಳ್ಳುವುದಿಲ್ಲ.
ಭಯೋತ್ಪಾದನೆಯೇ ಈಗ ಧರ್ಮ ಆಗಿಬಿಟ್ಟಿದೆ. ಈ ಹಿಂದೆ ಕೆಲವೊಬ್ಬರು ಮಹಿಳೆಯರು ಜೀನ್ಸ್ ಧರಿಸಬಾರದು ಎಂದು ಹೇಳಿದ್ದರು. ಭಾರತದಲ್ಲಿರುವ ಮಹಿಳೆಯರು ಗೂಂಗಟ್ (ಮುಖ ಮುಚ್ಚುವಂತೆ ತಲೆ ಮೇಲೆ ಸೆರಗು ಹೊದ್ದುಕೊಳ್ಳುವುದು) ಹಾಕಿಕೊಳ್ಳುವುದನ್ನೂ ನೀವು ನಿಷೇಧಿಸುತ್ತೀರಾ? ವಸ್ತ್ರಗಳಿಂದ ಭಯೋತ್ಪಾದನೆಯನ್ನು ನಿರ್ಧರಿಸುವುದಾದರೆ ಸಾಧ್ವಿ ಪ್ರಜ್ಞಾ ಧರಿಸಿರುವುದು ಏನನ್ನು?
ಚುನಾವಣೆಯ ವೇಳೆ ಜನರನ್ನು ಧ್ರುವೀಕರಣಗೊಳಿಸುವ ಕಾರ್ಯವನ್ನು ಶಿವಸೇನೆ ಮಾಡುತ್ತಿದೆ ಎಂದು ಆರೋಪಿಸಿರುವ ಒವೈಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…