Featured

ಭಯೋತ್ಪಾದನೆ ವಿರುದ್ಧ ಹೋರಾಡುವುದಕ್ಕಾಗಿ ಉಡುಗೆಗಳಿಗೆ ನಿಷೇಧ ಹೇರುವುದು ಸರಿಯಲ್ಲ : ಅಸಾವುದ್ದೀನ್ ಒವೈಸಿ -Vishwanews24

ನವದೆಹಲಿ: ಶ್ರೀಲಂಕಾದಲ್ಲಿ ಭದ್ರತಾ ದೃಷ್ಟಿಯಿಂದ ಬುರ್ಖಾ ನಿಷೇಧ ಮಾಡಿದ ಬೆನ್ನಲ್ಲೇ, ಭಾರತದಲ್ಲೂ ಬುರ್ಖಾ ನಿಷೇಧ ಮಾಡಬೇಕು ಎಂದು ಶಿವಸೇನೆ ಒತ್ತಾಯಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಒವೈಸಿ, ಉಡುಗೆಗಳಿಗೆ ನಿಷೇಧ ವಿಧಿಸಿ ಭಯೋತ್ಪಾದನೆ ವಿರುದ್ಧ ಹೋರಾಡುವುದರ ಬದಲು ಮನಸ್ಥಿತಿ ಬದಲಾಗಬೇಕಿದೆ ಎಂದಿದ್ದಾರೆ.

ಬುರ್ಖಾ ಅವರವರ ಆಯ್ಕೆ ಎಂದು ಸುಪ್ರೀಂಕೋರ್ಟ್ ತೀರ್ಪನ್ನು ಶಿವಸೇನೆ ಓದಿಕೊಳ್ಳಲಿ. ನಿಮಗೆ ಏನು ಇಷ್ಟವೋ ಅದನ್ನು ಧರಿಸಬಹುದು, ಅದು ಬುರ್ಖಾ ಆಗಿರಬಹುದು, ಜೀನ್ಸ್ ಆಗಿರಬಹುದು. ಇಲ್ಲಿ ಆಯ್ಕೆ ಇದೆ. ಅದು ನಮ್ಮ ಮೂಲಭೂತ ಹಕ್ಕು ಕೂಡಾ ಆಗಿದೆ ಎಂದಿದ್ದಾರೆ ಒವೈಸಿ.

ಮೋದಿಯನ್ನು ಪರಾಭವಗೊಳಿಸುತ್ತೇವೆ ಎಂದು ಶಿವಸೇನೆ  ಈ ಹಿಂದೆ ಸಿಕ್ಕಾಪಟ್ಟೆ ಬರೆದಿತ್ತು. ಆದರೆ ಇವತ್ತು ಅವರೆಲ್ಲರೂ ಜತೆಯಾಗಿದ್ದಾರೆ. ಶಿವಸೇನೆ ಅಸಂಬದ್ಧವಾಗಿ ಮಾತನಾಡುತ್ತಿದೆ. ಕಾನೂನು ಚೌಕಟ್ಟುಗಳನ್ನು ಶಿವಸೇನೆ ಅರ್ಥ ಮಾಡಿಕೊಳ್ಳುವುದಿಲ್ಲ.
ಭಯೋತ್ಪಾದನೆಯೇ ಈಗ ಧರ್ಮ ಆಗಿಬಿಟ್ಟಿದೆ. ಈ ಹಿಂದೆ ಕೆಲವೊಬ್ಬರು ಮಹಿಳೆಯರು ಜೀನ್ಸ್ ಧರಿಸಬಾರದು ಎಂದು ಹೇಳಿದ್ದರು. ಭಾರತದಲ್ಲಿರುವ ಮಹಿಳೆಯರು ಗೂಂಗಟ್ (ಮುಖ ಮುಚ್ಚುವಂತೆ ತಲೆ ಮೇಲೆ ಸೆರಗು ಹೊದ್ದುಕೊಳ್ಳುವುದು) ಹಾಕಿಕೊಳ್ಳುವುದನ್ನೂ ನೀವು ನಿಷೇಧಿಸುತ್ತೀರಾ? ವಸ್ತ್ರಗಳಿಂದ ಭಯೋತ್ಪಾದನೆಯನ್ನು ನಿರ್ಧರಿಸುವುದಾದರೆ ಸಾಧ್ವಿ ಪ್ರಜ್ಞಾ ಧರಿಸಿರುವುದು ಏನನ್ನು?

ಚುನಾವಣೆಯ ವೇಳೆ ಜನರನ್ನು ಧ್ರುವೀಕರಣಗೊಳಿಸುವ ಕಾರ್ಯವನ್ನು ಶಿವಸೇನೆ ಮಾಡುತ್ತಿದೆ ಎಂದು ಆರೋಪಿಸಿರುವ ಒವೈಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

1 day ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

1 day ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

1 day ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

1 day ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

1 day ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

1 day ago