ನ್ಯೂಯಾರ್ಕ್: ಗಡಿಯಾಚೆಗಿನ ಭಯೋತ್ಪಾದನೆ ಗುರಿಯಾಗಿಟ್ಟುಕೊಂಡು ವಿಶ್ವ ವೇದಿಕೆಯಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮಾಡಿರುವ ಕಟು ಟೀಕೆಗಳಿಂದ ಬೆಚ್ಚಿಬಿದ್ದಿರುವ ಪಾಕಿಸ್ತಾನ, ಆರ್ಎಸ್ಎಸ್ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರತ್ತ ಬೊಟ್ಟು ಮಾಡಿ ಬಚಾವಾಗಲು ಯತ್ನಿಸಿದೆ.
‘‘ಬಿಜೆಪಿಯ ಸೈದ್ಧಾಂತಿಕ ಸಲಹೆಗಾರ ಆರ್ಎಸ್ಎಸ್, ಭಾರತದಲ್ಲಿ ಮತಾಂಧತೆಯನ್ನು ಹರಡುವ ಕೆಲಸ ಮಾಡುತ್ತಿದೆ. ಇದು ನಮ್ಮ ಉಪ ಖಂಡದಲ್ಲಿ ಭಯೋತ್ಪಾದನೆ ವಿಸ್ತರಿಸಲು ಕಾರಣವಾಗಿದೆ. ಭಾರತದ ಅತಿದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಕೂಡ ಅಂಥದ್ದೇ ಕೆಲಸ ಮಾಡುತ್ತಿದ್ದಾರೆ. ಹಿಂದೂ ಧರ್ಮದ ಶ್ರೇಷ್ಠತೆ ಪರ ಅವರು ಉಗ್ರ ಹೋರಾಟಕ್ಕೆ ಬಹಿರಂಗ ಬೆಂಬಲ ನೀಡಿದ್ದಾರೆ,’’ ಎಂದು ವಿಶ್ವಸಂಸ್ಥೆಯಲ್ಲಿನ ಪಾಕ್ ರಾಯಭಾರಿ ಸಾದ್ ವಾರೈಕ್ ಆರೋಪಿಸಿದರು.
ಬಾಂಗ್ಲಾ ವಲಸಿಗರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಅಧ್ಯಕ್ಷ ಅಮಿತ್ ಶಾ ನಡೆಸಿದ ವಾಗ್ದಾಳಿಯನ್ನೂ ತಮ್ಮ ಅನುಕೂಲಕ್ಕೆ ತಕ್ಕತೆ ತಿರುಗಿಸಿದ ವಾರೈಕ್, ‘‘ಬಿಜೆಪಿ ನಾಯಕರೊಬ್ಬರ ವಾಗ್ದಾಳಿಯಿಂದ ಅಸ್ಸಾಂನಲ್ಲಿರುವ ಬೆಂಗಾಲಿಗಳು ಹಠಾತ್ತನೆ ನೆಲೆ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಅವರನ್ನು ಆ ನಾಯಕರು ಗೆದ್ದಲ ಹುಳುಗಳು ಎಂದು ಜರಿದಿದ್ದಾರೆ. ಇದರಿಂದ ಅಲ್ಲಿ ಚರ್ಚ್ ಮತ್ತು ಮಸೀದಿಗಳಿಗೆ ಬೆಂಕಿ ಇಡಲಾಗಿದೆ,’’ ಎಂದು ದೂರಿದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…