Featured

ಭರವಸೆ ಈಡೇರಿಸದೇ ಕೇವಲ ರಾಜಕಾರಣ ಮಾಡಿದ್ದರಿಂದ ಜನತೆ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ : ಪ್ರಮೋದ್‌ ಮುತಾಲಿಕ್‌ – vishwanews24

ಬಿಜೆಪಿ ಹಿಂದುತ್ವ ಮರೆತಿದ್ದಕ್ಕೆ ಇಂದು ವಿಪಕ್ಷದ ಸ್ಥಾನದಲ್ಲಿದೆ : ಪ್ರಮೋದ್‌ ಮುತಾಲಿಕ್‌

ಹಾವೇರಿ : ಬಿಜೆಪಿ ಹಿಂದುತ್ವ ಮರೆತಿದ್ದಕ್ಕೆ ಇಂದು ವಿಪಕ್ಷದ ಸ್ಥಾನದಲ್ಲಿದೆ. ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸದೇ ಕೇವಲ ರಾಜಕಾರಣ ಮಾಡಿದ್ದರಿಂದ ಜನತೆ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದು ಶ್ರೀರಾಮ ಸೇನಾ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಬಿಜೆಪಿ ವಿರುದ್ದ ಹರಿಹಾಯ್ದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಟ್ಟಲು ನಾವೆಲ್ಲ ಕಷ್ಟಪಟ್ಟಿದ್ದೇವೆ. ಹೀಗಾಗಿ ಅವರನ್ನು ಪ್ರಶ್ನಿಸುವ ಹಕ್ಕು ನಮಗಿದೆ. ಇನ್ನು ಕಿತ್ತೂರು ರಾಣಿ ಚೆನ್ನಮ್ಮನನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಕಡೆಗಣಿಸಿದೆ. 200ನೇ ವಿಜಯೋತ್ಸವ ಸಪ್ಪೆಯಾಗಿದೆ. ಯಾವುದೇ ಪತ್ರಿಕೆಯಲ್ಲಿ ಜಾಹೀರಾತು ಇಲ್ಲ. ಆದರೆ ತಮ್ಮ ಇಲಾಖೆ ಅಥವಾ ವೈಯಕ್ತಿಕ ಹಿತಾಸಕ್ತಿಯ ವಿಚಾರಗಳಿಗೆ ಹೆಚ್ಚಿನ ಜಾಹೀರಾತುಗಳನ್ನು ನೀಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರಿಗೆ ಮನವಿ ನೀಡುತ್ತೇವೆ. ನಮ್ಮ ಬೇಡಿಕೆ ಈಡೇರಿಸಬೇಕು. ಆಗ ನಮ್ಮ ಬೆಂಬಲ ನೀಡುವ ಜತೆಗೆ ಪ್ರಚಾರದಲ್ಲೂ ನಾವು ಪಾಲ್ಗೊಳ್ಳುತ್ತೇವೆ. ಇಲ್ಲದಿದ್ದರೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದರು. ಕಾಂಗ್ರೆಸ್‌ಗೆ ಬೆಂಬಲಿಸುವ ಪ್ರಶ್ನೆಯೇ ಇಲ್ಲ. ಮತಾಂಧರ, ಹಿಂದೂ ವಿರೋಧಿಗಳಿಗೆ ಯಾವತ್ತೂ ನಮ್ಮ ಬೆಂಬಲವಿಲ್ಲ. ಇವರು ನಮ್ಮ ಬೇಡಿಕೆಗೆ ಸ್ಪಂದಿಸದೇ ಇದ್ದಲ್ಲಿ ನೋಟಾ ಚಲಾವಣೆ ಅಥವಾ ಒಬ್ಬ ಸಾಮಾನ್ಯ ಹಿಂದೂ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುತ್ತೇವೆ ಎಂದರು. ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷ ಲೋಕೇಶ ಕಾರಡಗಿ, ಧಾರವಾಡ ವಿಭಾಗ ಅಧ್ಯಕ್ಷ ಗದಿಗೆಪ್ಪ ಕುರವತ್ತಿ ಇದ್ದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

7 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

8 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

8 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

8 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

8 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

9 hours ago