Featured

ಭರ್ಜರಿ ಗುಡ್ ನ್ಯೂಸ್ : ಕೇಂದ್ರದಿಂದ 2 ಲಕ್ಷ ಉದ್ಯೋಗ ಸೃಷ್ಟಿ

 ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದಲ್ಲಿ ಬರೋಬ್ಬರಿ 60 ಸಾವಿರ ಕೋಟಿ ರು. ವೆಚ್ಚದ 81 ಯೋಜನೆಗಳಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಅಂದರೆ 80 ಕೋಟಿ ಕ್ಷೇತ್ರಗಳನ್ನು ಹೊಂದಿರುವ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುವ ಉತ್ತರಪ್ರದೇಶದಲ್ಲಿ ಮೋದಿ ಅವರು ಬೃಹತ್ ಮೊತ್ತದ ಯೋಜನೆ ಗಳಿಗೆ ಚಾಲನೆ ನೀಡಿರುವುದು ಮಹತ್ವದ್ದಾಗಿದೆ.

ಅಲ್ಲದೆ ಹಿಂದುಳಿದಿರುವ ಉತ್ತರಪ್ರದೇಶದಲ್ಲಿ ಕೈಗಾರಿಕೀಕರಣಕ್ಕೆ ಒತ್ತು ನೀಡಿದಂತಾಗಿದೆ. ಈ ಯೋಜನೆಗಳಿಂದ 2 ಲಕ್ಷ ಉದ್ಯೋಗ ಸೃಷ್ಟಿ ಯಾಗುವ ನಿರೀಕ್ಷೆ ಇದೆ. ಭೂಮಿಪೂಜೆ ಕಾರ್ಯಕ್ರಮದಲ್ಲಿ ಆದಿತ್ಯ ಬಿರ್ಲಾ ಸಮೂಹದ ಕುಮಾರ ಮಂಗಳಂ ಬಿರ್ಲಾ, ಅದಾನಿ ಸಮೂಹದ ಗೌತಮ್ ಅದಾನಿ, ಎಸ್ಸೆಲ್ ಗ್ರೂಪ್‌ನ ಸುಭಾಷ್ ಚಂದ್ರ, ಐಟಿಸಿ ಕಂಪನಿ ವ್ಯವಸ್ಥಾಪಕ ನಿರ್ದೆಶಕ ಸಂಜೀವ್ ಪುರಿ ಸೇರಿದಂತೆ 80 ಖ್ಯಾತನಾಮ ಉದ್ಯಮಿಗಳು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಮೋದಿ ಅವರು, ಇಂದಿನ ಕಾರ್ಯಕ್ರಮವನ್ನು ಗ್ರೌಂಡ್ ಬ್ರೇಕಿಂಗ್ (ಶಂಕುಸ್ಥಾಪನೆ) ಕಾರ್ಯಕ್ರಮ ಎಂದು ಕೆಲವರು ಕರೆಯುತ್ತಾರೆ.

ಆದರೆ ಇದು ರೆಕಾರ್ಡ್ ಬ್ರೇಕಿಂಗ್ (ದಾಖಲೆಯ) ಕಾರ್ಯಕ್ರಮ. ನಾನೂ ದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿದ್ದೆ. 60 ಸಾವಿರ ಕೋಟಿ ರು. ಹೂಡಿಕೆ ಅತಿದೊಡ್ಡ ಸಾಧನೆ. ಹೀಗಾಗಿ ಅಧಿಕಾರಿಗಳಿಗೆ ಧನ್ಯವಾದ ಹೇಳುವೆ ಎಂದು ತಿಳಿಸಿದರು. ಫೆಬ್ರವರಿಯಲ್ಲಷ್ಟೇ ಉತ್ತರಪ್ರದೇಶದಲ್ಲಿ ಹೂಡಿಕೆದಾರರ ಸಮಾವೇಶ ನಡೆದಿತ್ತು

 

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago