ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದಲ್ಲಿ ಬರೋಬ್ಬರಿ 60 ಸಾವಿರ ಕೋಟಿ ರು. ವೆಚ್ಚದ 81 ಯೋಜನೆಗಳಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಅಂದರೆ 80 ಕೋಟಿ ಕ್ಷೇತ್ರಗಳನ್ನು ಹೊಂದಿರುವ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುವ ಉತ್ತರಪ್ರದೇಶದಲ್ಲಿ ಮೋದಿ ಅವರು ಬೃಹತ್ ಮೊತ್ತದ ಯೋಜನೆ ಗಳಿಗೆ ಚಾಲನೆ ನೀಡಿರುವುದು ಮಹತ್ವದ್ದಾಗಿದೆ.
ಅಲ್ಲದೆ ಹಿಂದುಳಿದಿರುವ ಉತ್ತರಪ್ರದೇಶದಲ್ಲಿ ಕೈಗಾರಿಕೀಕರಣಕ್ಕೆ ಒತ್ತು ನೀಡಿದಂತಾಗಿದೆ. ಈ ಯೋಜನೆಗಳಿಂದ 2 ಲಕ್ಷ ಉದ್ಯೋಗ ಸೃಷ್ಟಿ ಯಾಗುವ ನಿರೀಕ್ಷೆ ಇದೆ. ಭೂಮಿಪೂಜೆ ಕಾರ್ಯಕ್ರಮದಲ್ಲಿ ಆದಿತ್ಯ ಬಿರ್ಲಾ ಸಮೂಹದ ಕುಮಾರ ಮಂಗಳಂ ಬಿರ್ಲಾ, ಅದಾನಿ ಸಮೂಹದ ಗೌತಮ್ ಅದಾನಿ, ಎಸ್ಸೆಲ್ ಗ್ರೂಪ್ನ ಸುಭಾಷ್ ಚಂದ್ರ, ಐಟಿಸಿ ಕಂಪನಿ ವ್ಯವಸ್ಥಾಪಕ ನಿರ್ದೆಶಕ ಸಂಜೀವ್ ಪುರಿ ಸೇರಿದಂತೆ 80 ಖ್ಯಾತನಾಮ ಉದ್ಯಮಿಗಳು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಮೋದಿ ಅವರು, ಇಂದಿನ ಕಾರ್ಯಕ್ರಮವನ್ನು ಗ್ರೌಂಡ್ ಬ್ರೇಕಿಂಗ್ (ಶಂಕುಸ್ಥಾಪನೆ) ಕಾರ್ಯಕ್ರಮ ಎಂದು ಕೆಲವರು ಕರೆಯುತ್ತಾರೆ.
ಆದರೆ ಇದು ರೆಕಾರ್ಡ್ ಬ್ರೇಕಿಂಗ್ (ದಾಖಲೆಯ) ಕಾರ್ಯಕ್ರಮ. ನಾನೂ ದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿದ್ದೆ. 60 ಸಾವಿರ ಕೋಟಿ ರು. ಹೂಡಿಕೆ ಅತಿದೊಡ್ಡ ಸಾಧನೆ. ಹೀಗಾಗಿ ಅಧಿಕಾರಿಗಳಿಗೆ ಧನ್ಯವಾದ ಹೇಳುವೆ ಎಂದು ತಿಳಿಸಿದರು. ಫೆಬ್ರವರಿಯಲ್ಲಷ್ಟೇ ಉತ್ತರಪ್ರದೇಶದಲ್ಲಿ ಹೂಡಿಕೆದಾರರ ಸಮಾವೇಶ ನಡೆದಿತ್ತು
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…