ಪಂಜಾಬ್ : ಪಂಚರಾಜ್ಯಗಳ ಚುನಾವಣಾ ತಯಾರಿಯ ವೇಳೆ ವಿದೇಶ ಪ್ರವಾಸಕ್ಕೆ ತೆರಳಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಮರ್ಥಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯನ್ನು ಏಕೆ ಟೀಕಿಸಬೇಕು? ಪಂಜಾಬ್ನಲ್ಲಿ ಅವರ ನೇತೃತ್ವದಲ್ಲೇ ಕಾಂಗ್ರೆಸ್ 76 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ನ 8 ಸಂಸದರು ಸಹ ಇದ್ದಾರೆ. ಯಾವಾಗ ಬೇಕಾದರೂ ರಾಹುಲ್ ಗಾಂಧಿ ಪಂಜಾಬ್ಗೆ ಬರಲು ಸ್ವತಂತ್ರರು” ಎಂದಿದ್ಧಾರೆ.
“ಗಾಂಧಿ ಕುಟುಂಬ ಯಾವುದೇ ರಾಜ್ಯದ ಅಧಿಕಾರದಲ್ಲಿ ಅನಗತ್ಯವಾಗಿ ಮೂಗು ತೂರಿಸುವುದಕ್ಕೆ ಹೋಗುವುದಿಲ್ಲ. ಗಾಂಧಿ ಕುಟುಂಬ ಸುಸಂಸ್ಕೃತ ಕುಟುಂಬವಾಗಿದೆ. ಅವರು ಪಂಜಾಬ್ ರಾಜಕೀಯದಲ್ಲೂ ಸಹ ಹಸ್ತಕ್ಷೇಪ ಮಾಡಿಲ್ಲ. ಭವಿಷ್ಯದಲ್ಲಿ ರಾಹುಲ್ ಗಾಂಧಿ ದೇಶದ ಚಿತ್ರಣವನ್ನು ಬದಲಾಯಿಸುತ್ತಾರೆ” ಎಂದು ಹೊಗಳಿದ್ದಾರೆ.
ಕಾಂಗ್ರೆಸ್ನ ಒಳಜಗಳ ಹಾಗೂ ರಾಹುಲ್ ಗಾಂಧಿ ಪ್ರವಾಸದ ನಡುವೆಯೇ ಬಿಜೆಪಿ ತನ್ನ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ. ಜನವರಿ 5ರಂದು ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಪ್ರಚಾರ ಸಭೆ ನಡೆಸಲಿದ್ದಾರೆ.
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…