ಪಂಜಾಬ್ : ಪಂಚರಾಜ್ಯಗಳ ಚುನಾವಣಾ ತಯಾರಿಯ ವೇಳೆ ವಿದೇಶ ಪ್ರವಾಸಕ್ಕೆ ತೆರಳಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಮರ್ಥಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯನ್ನು ಏಕೆ ಟೀಕಿಸಬೇಕು? ಪಂಜಾಬ್ನಲ್ಲಿ ಅವರ ನೇತೃತ್ವದಲ್ಲೇ ಕಾಂಗ್ರೆಸ್ 76 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ನ 8 ಸಂಸದರು ಸಹ ಇದ್ದಾರೆ. ಯಾವಾಗ ಬೇಕಾದರೂ ರಾಹುಲ್ ಗಾಂಧಿ ಪಂಜಾಬ್ಗೆ ಬರಲು ಸ್ವತಂತ್ರರು” ಎಂದಿದ್ಧಾರೆ.
“ಗಾಂಧಿ ಕುಟುಂಬ ಯಾವುದೇ ರಾಜ್ಯದ ಅಧಿಕಾರದಲ್ಲಿ ಅನಗತ್ಯವಾಗಿ ಮೂಗು ತೂರಿಸುವುದಕ್ಕೆ ಹೋಗುವುದಿಲ್ಲ. ಗಾಂಧಿ ಕುಟುಂಬ ಸುಸಂಸ್ಕೃತ ಕುಟುಂಬವಾಗಿದೆ. ಅವರು ಪಂಜಾಬ್ ರಾಜಕೀಯದಲ್ಲೂ ಸಹ ಹಸ್ತಕ್ಷೇಪ ಮಾಡಿಲ್ಲ. ಭವಿಷ್ಯದಲ್ಲಿ ರಾಹುಲ್ ಗಾಂಧಿ ದೇಶದ ಚಿತ್ರಣವನ್ನು ಬದಲಾಯಿಸುತ್ತಾರೆ” ಎಂದು ಹೊಗಳಿದ್ದಾರೆ.
ಕಾಂಗ್ರೆಸ್ನ ಒಳಜಗಳ ಹಾಗೂ ರಾಹುಲ್ ಗಾಂಧಿ ಪ್ರವಾಸದ ನಡುವೆಯೇ ಬಿಜೆಪಿ ತನ್ನ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ. ಜನವರಿ 5ರಂದು ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಪ್ರಚಾರ ಸಭೆ ನಡೆಸಲಿದ್ದಾರೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…