ಉಡುಪಿ: ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ.ರೇಣುಕಾ ಪ್ರಸಾದ್ ಕುರುಂಜಿ ಹಾಗೂ ಅವರ ಕುಟುಂಬಸ್ಥರಿಂದ ಬೆಳ್ಳಿರಥ ಸಮರ್ಪಿಸಲಿದ್ದು, ಈ ಬೆಳ್ಳಿ ರಥವು ಕೋಟೇಶ್ವರದಿಂದ ಹೊರಟು ಇಂದು ಅಂಬಾಗಿಲು ಜಂಕ್ಷನ್ಗೆ ತಲುಪಿದ ಸಂದರ್ಭದಲ್ಲಿ ಭವ್ಯ ಸ್ವಾಗತಿಸಲಾಯಿತು.
ಯಾವುದೇ ವಿಘ್ನಗಳು ಬಾರದೇ ಒಳ್ಳೆಯ ರೀತಿಯಲ್ಲಿ ಈ ರಥವು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಲುಪಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಬನ್ನಂಜೆ, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷೆ ಮಮತಾ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಮಹಾಬಲ ಕುಂದರ್, ಕಾಂಗ್ರೆಸ್ ಪಕ್ಷದ ನಾಯಕರಾದ ಯುವರಾಜ್ ಪುತ್ತೂರು, ಗಣೇಶ್ ನೆರ್ಗಿ, ಸತೀಶ್ ಕುಮಾರ್ ಮಂಚಿ, ಮೀನಾಕ್ಷಿ ಮಾಧವ ಬನ್ನಂಜೆ, ಸತೀಶ್ ಪುತ್ರನ್, ಶೋಭಾ ಕಕ್ಕುಂಜೆ, ಧನಂಜಯ್ ಕುಂದರ್, ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ, ಪುರಂದರ್ ಸಾಲ್ಯಾನ್, ತುಳಸಿದಾಸ್, ಸುಂದರಿ, ಸಂಜಯ್ ಆಚಾರ್ಯ, ಉಡುಪಿ ಜಿಲ್ಲಾ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷರಾದ ಸೀತಾರಾಮ್ ಗೌಡ, ಕಾರ್ಯದರ್ಶಿ ಹೇಮಾನಂದ್, ಮಾಜಿ ಕಾರ್ಯದರ್ಶಿ ಬಿ ಪಿ ಮಂಜುನಾಥ್, ಹಿರಿಯರಾದ ಬಾಬು ಗೌಡ, ಡಾ. ತುಕಾರಾಮ್, ಶಿವಪ್ಪ ಗೌಡ, ಕೃಷ್ಣ, ರಘುನಂದನ್, ಲಿಂಗಪ್ಪ ಗೌಡ, ವಿಕಾಸ್, ಸುರೇಶ್, ಸತೀಶ್, ಲೀಲಾವತಿ, ಕಮಲಾ ಸಿದ್ದರಾಜ್ ಗೌಡ, ಕುಸುಮಾ ಬಾಬುಗೌಡ ಸುಪ್ರಿತಾ, ಅರ್ಚನಾ ಹಾಗೂ ಇನ್ನಿತರ ಸಮಾಜದ ಕುಲಭಾಂದವರು ಉಪಸ್ಥಿತರಿದ್ದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…