Featured

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  ..

ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು..

ಇಂದಿರಾ ಗಾಂಧಿ ಅಂಬಾಸಿಡರ್ ಕಾರಿನಲ್ಲಿ ಓಡಾಡುತ್ತಿದ್ದರು ಇವರು ಅಂತ ಕಾರು ಮೋದಿ ಉಪಯೋಗಿಸಲಿ..

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ ಎಂದು ಎಂಎಲ್‌ಸಿ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ  ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ರಾಜ್ಯ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಕುಟುಕಿದ್ದ ಪ್ರಧಾನಿ ಮೋದಿಗೆ ತಿರುಗೇಟು ನೀಡಿದರು. ಪಿಎಂ ಎಂದರೆ ನಾವು ಪ್ರಧಾನಮಂತ್ರಿ ಎಂದು ತಿಳಿದುಕೊಂಡಿದ್ದೇವೆ. ಇವರು ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು. ಕರ್ನಾಟಕ ರಾಜ್ಯದ ರಾಜಕಾರಣದ ಬಗ್ಗೆ ಕಮ್ಮಿ ಮಾತಾಡೋದು ಒಳ್ಳೆಯದು. ನರೇಂದ್ರ ಮೋದಿಯವರನ್ನು ನಾನು ಯಾವಾಗ ಬೇಕಾದರೂ ಇಳಿಸಬಹುದು ಎಂದು ಅಮೆರಿಕ ಅಧ್ಯಕ್ಷ ಟ್ರಂಪ್‌ ಹೇಳಿದ್ದಾರೆ. ಕರ್ನಾಟಕ ಸಿಎಂ ಕುರ್ಚಿ ಬಗ್ಗೆ ಮಾತಾಡುವ ಮೊದಲು, ಅವರ ಕುರ್ಚಿ ಗಟ್ಟಿಯಾಗಿದೆಯೇ ಎಂದು ನೋಡಿಕೊಳ್ಳಲಿ ಎಂದಿದ್ದಾರೆ.

ಇದನ್ನೂ ಓದಿ:

ಎಪ್‍ಸ್ಟೀನ್ ಫೈಲ್ಸ್‌ನಲ್ಲಿ ಇವರ ಲೀಲೆಗಳು ಹೊರಗಡೆ ಬರುತ್ತೆ. ಆಗ ಚೇರ್‌ ಹೇಗೆ ಉಳಿಸಿಕೊಳ್ಳುತ್ತಾರೆ ಎಂದು ಜನರಿಗೆ ಹೇಳಿದರೆ ಒಳ್ಳೆಯದು. ಮೊದಲು ಅದಕ್ಕೆ ಉತ್ತರ ಕೊಡಲಿ. ಈಗ ಗುಜರಾತ್ ಮಾಡೆಲ್ ಮರೆತು ಬಿಟ್ಟಿದ್ದಾರೆ. 12 ವರ್ಷಗಳ ಅರಾಜಕತೆ ಸೃಷ್ಟಿ ಮಾಡಿದವರು ಇವರು. ಬಿಹಾರದಲ್ಲಿ ನಿತೀಶ್ ಕುಮಾರ್, ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ, ಪ್ರಕಾಶಸಿಂಗ್ ಬಾದಲ್, ಎನ್‍ಸಿಪಿ ಯಾವ ರೀತಿ ಮುಗಿಸಿದರು. ಇದಕ್ಕೆಲ್ಲ ಕಾರಣ ಭಸ್ಮಾಸುರ ಆಗಿರುವ ನರೇಂದ್ರ ಮೋದಿ. ಅವರು ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು ಎಂದು ಕುಟುಕಿದ್ದಾರೆ.

ರಾಷ್ಟ್ರ ಅಧೋಗತಿಗೆ ಬಂದಿದೆ ಅನ್ನೋದು ಯಾರಿಗೂ ಕೂಡ ಗೊತ್ತಾಗ್ತಿಲ್ಲ. ಫೆ.28 ರಂದು ಪಶ್ಚಿಮ ಏಷ್ಯಾದಲ್ಲಿ ಪ್ರಾರಂಭವಾದ ಸಮಸ್ಯೆಗಳ ಬಗ್ಗೆ ರಾಹುಲ್ ಗಾಂಧಿ ಬಹಳ ಸ್ಪಷ್ಟವಾಗಿ ಹೇಳಿದ್ದರು. ದೇಶ ಬಹಳ ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಕ್ಕಿಹಾಕಿಕೊಳ್ಳುತ್ತೆ, ಇದರ ಬಗ್ಗೆ ಕ್ರಮ ವಹಿಸಬೇಕು ಎಂದು ಎಚ್ಚರಿಕೆ ಕೊಟ್ಟಿದ್ದರು. ಆದರೆ ಅವರ ಮಾತನ್ನು ಬಾಲಿಶ ಅಂತ ತಳ್ಳಿ ಹಾಕಿದ್ದರು. ಇವರಿಗೆ ನಾಲ್ಕು ತಿಂಗಳು ಚುನಾವಣೆ ಮಾಡಬೇಕಾಗಿತ್ತು. ಎಲ್ಲಿ ಹೋದರೂ ಕೂಡ ವಿರೋಧ ಪಕ್ಷವನ್ನು ನಂಬಬೇಡಿ, ಕಾಂಗ್ರೆಸ್ ನಂಬಬೇಡಿ ಸುಳ್ಳು ಹೇಳ್ತಿದ್ದಾರೆ ಎಂದಿದ್ದರು. ಯಾವುದೇ ತೊಂದರೆ ಆಗಲ್ಲ ಎಂದು ಭಾಷಣ ಬಿಗಿದರು.

ಇದನ್ನೂ ಓದಿ:

ಈಗ ಪೆಟ್ರೋಲ್ ಮಿತವ್ಯಯ ಮಾಡಿ ಎಂದು ಹೇಳುತ್ತಿದ್ದಾರೆ. ಚಿನ್ನ ಖರೀದಿ ಮಾಡಬೇಡಿ, ಫಾರಿನ್ ಟೂರ್‌ಗೆ ಹೋಗಬೇಡಿ ಎನ್ನುತ್ತಿದ್ದಾರೆ. ಇವರು ಏನು ಮಾಡುತ್ತಿದ್ದಾರೆ? ಕಳೆದ 12 ವರ್ಷದಿಂದ ಇವರಿಗೆ ಯಾವ ಹೊಣೆಗಾರಿಕೆ ಇತ್ತು ಎಂದು ಹೇಳಲಿ. ಐದು ತಿಂಗಳ ಕಾಲ ಬಹಳ ಹೊಣೆಗಾರಿಕೆ ಹೊತ್ತಿದ್ದೇನೆ. ಈಗ ನನ್ನ ಕೈಯಲ್ಲಿ ಆಗಲ್ಲ ಅಂತ ಹೇಳುತ್ತಿದ್ದಾರೆ.

ಇವರಿಗೆ ಎಂಟು ಸಾವಿರ ಕೋಟಿ ಏರೋಪ್ಲೇನ್ ಬೇಕು. ಮಿತವ್ಯಯ ಮಾಡಬೇಕಾದರೆ ಇವರು ಕಮರ್ಷಿಯಲ್ ಫ್ಲೈಟ್‌ಲ್ಲಿ ಓಡಾಡಲಿ. ಸಣ್ಣ ಕಾರಿನಲ್ಲಿ ಓಡಾಡಲಿ, ಇಂದಿರಾ ಗಾಂಧಿ ಅಂಬಾಸಿಡರ್ ಕಾರಿನಲ್ಲಿ ಓಡಾಡುತ್ತಿದ್ದರು. ಇವರು ಅಂತ ಕಾರು ಉಪಯೋಗಿಸಲಿ, ಲಾಲ್ ಬಹದ್ದೂರ್ ಶಾಸ್ತ್ರಿ ಫಿಯೆಟ್ ಕಾರ್ ಇಟ್ಕೊಂಡಿದ್ರು. ಅಂತದ್ರಲ್ಲಿ ಇವರು ಓಡಾಡಲಿ. ಇವರು ಮಾಡೋದೆಲ್ಲ ಮಾಡಬಹುದು. ಜನ ಸಾಮಾನ್ಯರು ಜೀವನ ನಡೆಸುವುದಕ್ಕೆ ಕಷ್ಟ ಆಗ್ತಿದೆ ಅನ್ನೋದು ಇವರಿಗೆ ಅರ್ಥ ಆಗಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ:

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

5 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago