Featured

ಭಾಗ್ಯಗಳ ಅನುಷ್ಠಾನದ ಜೊತೆಗೆ ಇಲಾಖೆಗಳ ಖಾಲಿ ಹುದ್ದೆ ಶೀಘ್ರ ಭರ್ತಿಗೆ ಸರಕಾರ ಮುಂದಾಗಲಿ : ಯಶ್ಪಾಲ್ ಸುವರ್ಣ ಆಗ್ರಹ – Vishwanews24

ಭಾಗ್ಯಗಳ ಅನುಷ್ಠಾನದ ಜೊತೆಗೆ ಇಲಾಖೆಗಳ ಖಾಲಿ ಹುದ್ದೆ ಶೀಘ್ರ ಭರ್ತಿಗೆ ಸರಕಾರ ಮುಂದಾಗಲಿ : ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ: ಜಿಲ್ಲೆಯಾದ್ಯಂತ ವಿವಿಧ ಇಲಾಖೆಗಳಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳ ತೀವ್ರ ಕೊರತೆಯಿಂದ ಸಾವಿರಾರು ಅರ್ಜಿಗಳು ವಿಲೇವಾರಿಯಾಗದೆ ಜನಸಾಮಾನ್ಯರಿಗೆ ತಮ್ಮ ಸಮಸ್ಯೆಗಳ ಪರಿಹಾರ ಹಾಗೂ ಸರಕಾರದ ಯೋಜನೆಗಳನ್ನು ಪಡೆಯಲು ಸಾಧ್ಯಗದೇ ತೀವ್ರ ತೊಂದರೆ ಉಂಟಾಗುತ್ತಿದ್ದು ವಿವಿಧ ಭಾಗ್ಯಗಳ ಅನುಷ್ಠಾನದ ಜೊತೆ ಜೊತೆಗೆ ರಾಜ್ಯ ಸರಕಾರ ಕೂಡಲೇ ಖಾಲಿ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸುವಂತೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ನಗರಾಭಿವೃದ್ಧಿ ಪ್ರಾಧಿಕಾರ, ನಗರ ಸಭೆ, ಮೀನುಗಾರಿಕೆ, ಆರೋಗ್ಯ, ಕಂದಾಯ, ಗ್ರಾಮ ಪಂಚಾಯತ್ ಮೊದಲಾದ ಜನ ಸಾಮಾನ್ಯರ ದೈನಂದಿನ ಚಟುವಟಿಕೆಗೆ ಪೂರಕವಾಗಿರುವ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದ ಜನಸಾಮಾನ್ಯರ ತುರ್ತು ಕೆಲಸಗಳು ವಿಳಂಬವಾಗುತ್ತಿದೆ.

ರಾಜ್ಯ ಸರ್ಕಾರ ಆಡಳಿತ ಬಂದ ದಿನದಿಂದ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಭಾಗ್ಯಗಳ ಅನುಷ್ಠಾನ ಮಾಡುವ ಬಗ್ಗೆ ಮಾತ್ರ ಚರ್ಚೆ ನಡೆಸುತ್ತಿದ್ದು, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯವನ್ನು ಕಡೆಗಣಿಸಿದೆ.

ಪಠ್ಯ ಪುಸ್ತಕ ಪರಿಷ್ಕರಣೆ, ಮತಾಂತರ ನಿಷೇಧ ಕಾನೂನು ರದ್ದು, ಗೋಹತ್ಯೆ ನಿಷೇಧ ಕಾನೂನು ಹಿಂಪಡೆಯುವ ವಿವಾದಾತ್ಮಕ ವಿಚಾರದಲ್ಲಿ ತೀವ್ರ ಆಸಕ್ತಿ ತೋರುವ ರಾಜ್ಯ ಸರ್ಕಾರ ಈ ಗಂಭೀರ ಸಮಸ್ಯೆಯ ಬಗ್ಗೆ ತೀವ್ರ ನಿರ್ಲಕ್ಷ್ಯ ಮಾಡುತ್ತಿದೆ.

ರಾಜ್ಯ ಸರ್ಕಾರ ಸಮಸ್ಯೆಯ ಗಂಭೀರತೆಯನ್ನು ಅರಿತು ಕೂಡಲೇ ಆದ್ಯತೆಯ ಮೇರೆಗೆ ಸಿಬ್ಬಂದಿಗಳ ಭರ್ತಿಗೆ ಆದೇಶ ಹೊರಡಿಸುವಂತೆ ಆಗ್ರಹಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

26 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

23 hours ago