Featured

ಭಾಗ್ಯಗಳ ಅನುಷ್ಠಾನದ ಜೊತೆಗೆ ಇಲಾಖೆಗಳ ಖಾಲಿ ಹುದ್ದೆ ಶೀಘ್ರ ಭರ್ತಿಗೆ ಸರಕಾರ ಮುಂದಾಗಲಿ : ಯಶ್ಪಾಲ್ ಸುವರ್ಣ ಆಗ್ರಹ – Vishwanews24

ಭಾಗ್ಯಗಳ ಅನುಷ್ಠಾನದ ಜೊತೆಗೆ ಇಲಾಖೆಗಳ ಖಾಲಿ ಹುದ್ದೆ ಶೀಘ್ರ ಭರ್ತಿಗೆ ಸರಕಾರ ಮುಂದಾಗಲಿ : ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ: ಜಿಲ್ಲೆಯಾದ್ಯಂತ ವಿವಿಧ ಇಲಾಖೆಗಳಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳ ತೀವ್ರ ಕೊರತೆಯಿಂದ ಸಾವಿರಾರು ಅರ್ಜಿಗಳು ವಿಲೇವಾರಿಯಾಗದೆ ಜನಸಾಮಾನ್ಯರಿಗೆ ತಮ್ಮ ಸಮಸ್ಯೆಗಳ ಪರಿಹಾರ ಹಾಗೂ ಸರಕಾರದ ಯೋಜನೆಗಳನ್ನು ಪಡೆಯಲು ಸಾಧ್ಯಗದೇ ತೀವ್ರ ತೊಂದರೆ ಉಂಟಾಗುತ್ತಿದ್ದು ವಿವಿಧ ಭಾಗ್ಯಗಳ ಅನುಷ್ಠಾನದ ಜೊತೆ ಜೊತೆಗೆ ರಾಜ್ಯ ಸರಕಾರ ಕೂಡಲೇ ಖಾಲಿ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸುವಂತೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ನಗರಾಭಿವೃದ್ಧಿ ಪ್ರಾಧಿಕಾರ, ನಗರ ಸಭೆ, ಮೀನುಗಾರಿಕೆ, ಆರೋಗ್ಯ, ಕಂದಾಯ, ಗ್ರಾಮ ಪಂಚಾಯತ್ ಮೊದಲಾದ ಜನ ಸಾಮಾನ್ಯರ ದೈನಂದಿನ ಚಟುವಟಿಕೆಗೆ ಪೂರಕವಾಗಿರುವ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದ ಜನಸಾಮಾನ್ಯರ ತುರ್ತು ಕೆಲಸಗಳು ವಿಳಂಬವಾಗುತ್ತಿದೆ.

ರಾಜ್ಯ ಸರ್ಕಾರ ಆಡಳಿತ ಬಂದ ದಿನದಿಂದ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಭಾಗ್ಯಗಳ ಅನುಷ್ಠಾನ ಮಾಡುವ ಬಗ್ಗೆ ಮಾತ್ರ ಚರ್ಚೆ ನಡೆಸುತ್ತಿದ್ದು, ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕಾರ್ಯವನ್ನು ಕಡೆಗಣಿಸಿದೆ.

ಪಠ್ಯ ಪುಸ್ತಕ ಪರಿಷ್ಕರಣೆ, ಮತಾಂತರ ನಿಷೇಧ ಕಾನೂನು ರದ್ದು, ಗೋಹತ್ಯೆ ನಿಷೇಧ ಕಾನೂನು ಹಿಂಪಡೆಯುವ ವಿವಾದಾತ್ಮಕ ವಿಚಾರದಲ್ಲಿ ತೀವ್ರ ಆಸಕ್ತಿ ತೋರುವ ರಾಜ್ಯ ಸರ್ಕಾರ ಈ ಗಂಭೀರ ಸಮಸ್ಯೆಯ ಬಗ್ಗೆ ತೀವ್ರ ನಿರ್ಲಕ್ಷ್ಯ ಮಾಡುತ್ತಿದೆ.

ರಾಜ್ಯ ಸರ್ಕಾರ ಸಮಸ್ಯೆಯ ಗಂಭೀರತೆಯನ್ನು ಅರಿತು ಕೂಡಲೇ ಆದ್ಯತೆಯ ಮೇರೆಗೆ ಸಿಬ್ಬಂದಿಗಳ ಭರ್ತಿಗೆ ಆದೇಶ ಹೊರಡಿಸುವಂತೆ ಆಗ್ರಹಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

55 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 hour ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago