Featured

ಭಾರತಕ್ಕಿಂದು ಕರಾಳ ದಿನ : ಪುಲ್ವಾಮಾ ದಾಳಿಗೆ 3 ವರ್ಷ ; ಹುತ್ಮಾತ ವೀರ ಯೋಧರಿಗೆ ಗೌರವ ನಮನ – Vishwanews24

ಭಾರತಕ್ಕಿಂದು ಕರಾಳ ದಿನ : ಪುಲ್ವಾಮಾ ದಾಳಿಗೆ 3 ವರ್ಷ ; ಹುತ್ಮಾತ ವೀರ ಯೋಧರಿಗೆ ಗೌರವ ನಮನ – Vishwanews24

2019ರ ಫೆಬ್ರವರಿ 14ರಂದು ಉಗ್ರರ ಅಟ್ಟಹಾಸಕ್ಕೆ 40 ಯೋಧರು ಹುತಾತ್ಮರಾಗಿದ್ದರು..

ಫೆಬ್ರವರಿ 14 ಈ ದಿನವನ್ನು ಬಹುಶಹ ಭಾರತೀಯರು ಯಾರು ಮರೆಯಲು ಸಾಧ್ಯವೇ ಇಲ್ಲ.. ನೆಮ್ಮದಿಯಾಗಿ ಇದ್ದ ಭಾರತೀಯರಲ್ಲಿ ಪಾಕಿಸ್ತಾನದ ವಿರುದ್ಧ ಆಕ್ರೋಶದ ಕಟ್ಟೆ ಹೊಡೆಯುವಂತೆ ಮಾಡಿದ ದಿನ.ಭಾರತದ ಪ್ರತಿಯೊಬ್ಬ ಮನೆಮನೆಯ ಜನರು ಕಣ್ಣೀರಿಟ್ಟದಿನ..ಇಡೀ ವಿಶ್ವದಲ್ಲಿ ಪ್ರೇಮಿಗಳ ದಿನ ಮನೆ ಮಾಡಿದ್ರೆ, ಭಾರತದಲ್ಲಿ ಮಾತ್ರ ಉಗ್ರರ ಭೀಕರ ಅಟ್ಟಹಾಸಕ್ಕೆ ಯೋಧರ ಕೆಂಪು ನೆತ್ತರು ಹರಿಯುವಂತೆ ಮಾಡಿದ ಕರಾಳ ದಿನ.

ಇಂದಿಗೆ ಸರಿಯಾಗಿ ಮೂರು ವರ್ಷಗಳ ಹಿಂದೆ.. ಇಡೀ ದೇಶವೇ ಪ್ರೇಮಿಗಳ ದಿನಾಚರಣೆ ಸಂಭ್ರಮ, ಪರ-ವಿರೋಧ ಚರ್ಚೆಗಳಲ್ಲಿದ್ದರೆ ಅತ್ತ ಸಂಜೆ ವೇಳೆಗೆ ಸಿಡಿಲಬ್ಬರದ ಸುದ್ದಿಯೊಂದು ಕಿವಿಗಪ್ಪಳಿಸಿತ್ತು.  2019ರ ಫೆಬ್ರವರಿ 14 ಸಂಜೆ 3:15ರ ವೇಳೆಗೆ ಉಗ್ರರ ಅಟ್ಟಹಾಸಕ್ಕೆ ಭಾರತೀಯ ಸೈನಿಕರನ್ನು ಪ್ರಾಣತೆತ್ತಿದ್ದರು. ಬಹುಶಃ ಭಾರತ ದೇಶ ಎಂದೆಂದಿಗೂ ಮರೆಯದ ಭೀಕರ ಘಟನೆಯಿದು. ಮಧ್ಯಾಹ್ನತನಕ ಪ್ರೇಮಿಗಳ ದಿನಾಚರಣೆಯಲ್ಲಿ ಮಿಂದೆದ್ದಿದ್ದ ಜನರು ಸಂಜೆ ವೇಳೆಗೆ ಕಣ್ಣೀರಲ್ಲಿ ಕೈತೊಳೆದಿದ್ದರು.

ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥ್‌ಪೋರಾ ಬಳಿಯ ಅವಾಂತಿಪೋರಾ ಸಮೀಪ  ರಾ.ಹೆ 44ರಲ್ಲಿ 78 ಸೇನಾ ವಾಹನಗಳು ಸಿಆರ್‌ಪಿಎಫ್ ಯೋಧರನ್ನು ಕರೆದುಕೊಂಡು ಸಾಲಾಗಿ ಸಾಗುತ್ತಿದ್ದವು. ಈ ವೇಳೆ 350 ಕೆಜಿ ಸ್ಫೋಟಕಗಳನ್ನು ಹೊತ್ತ ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುಪಿಯೊಂದು ನೇರವಾಗಿ ಸೇನಾ ವಾಹನಕ್ಕೆ ಡಿಕ್ಕಿ ಹೊಡೆಯಿತು. ಪರಿಣಾಮ ಕ್ಷಣ ಮಾತ್ರದಲ್ಲೇ 76ನೇ ಬೆಟಾಲಿಯನ್‌ನ 40 ಯೋಧರು ಹುತಾತ್ಮರಾದರು.

ಉಗ್ರರ ಅಟ್ಟಹಾಸಕ್ಕೆ ಉತ್ತರ ನೀಡಲು ಭಾರತ ಸಂಕಲ್ಪ ಮಾಡಿತು. ಪಾಕಿಸ್ತಾನದ ಖೈಬರ್​ ಪಖ್ತುನ್​ಖ್ವಾದ ಬಾಲಾಕೋಟ್​ನಲ್ಲಿರುವ ಜೈಷ್​ ಉಗ್ರಗಾಮಿಗಳ ತಾಣಗಳ ಮೇಲೆ ಪುಲ್ವಾಮಾ ದಾಳಿಯ 12 ದಿನಗಳ ನಂತರ, ಅಂದ್ರೆ ಫೆಬ್ರವರಿ 26 ರಂದು ಉಗ್ರರ ನೆಲೆ ಮೇಲೆ ವೈಮಾನಿಕ ದಾಳಿ ನಡೆಸಿತ್ತು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

12 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

13 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

14 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

15 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

15 hours ago