Featured

ಭಾರತಕ್ಕೂ ಕಾಲಿಟ್ಟ ಮಂಕಿಪಾಕ್ಸ್  : ಕೇರಳದಲ್ಲಿ ಮೊದಲ ಪ್ರಕರಣ ದಾಖಲು- Vishwanews24

ಭಾರತಕ್ಕೂ ಕಾಲಿಟ್ಟ ಮಂಕಿಪಾಕ್ಸ್  : ಕೇರಳದಲ್ಲಿ ಮೊದಲ ಪ್ರಕರಣ ದಾಖಲು

ನವದೆಹಲಿ: ಪಾಶ್ಚಿಮಾತ್ಯ ದೇಶಗಳಲ್ಲಿ ಕಂಡುಬರುತ್ತಿದ್ದ ಮಂಕಿಪಾಕ್ಸ್‌ ವೈರಸ್‌ನ ಮೊದಲ ಪ್ರಕರಣ ಭಾರತದಲ್ಲಿ ವರದಿಯಾಗಿದೆ. ಕೇರಳದ ಒಬ್ಬ ವ್ಯಕ್ತಿಗೆ  ಮಂಕಿಪಾಕ್ಸ್ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೆಲ ದಿನಗಳ ಹಿಂದೆ ಯುಎಇಯಿಂದ ಆಗಮಿಸಿದ್ದ 35 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದೂ ತಿಳಿಸಿದ್ದಾರೆ.

ಅವರ ಪೋಷಕರು, ವಿಮಾನದಲ್ಲಿ ಸಮೀಪ ಕುಳಿತಿದ್ದ 11 ಮಂದಿ ಪ್ರಯಾಣಿಕರು, ಕ್ಯಾಬ್ ಮತ್ತು ಆಟೊ ಡ್ರೈವರ್‌ಗಳು, ಚಿಕಿತ್ಸೆ ನೀಡಿದ್ದ ಕೊಲ್ಲಂನ ಖಾಸಗಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಸೇರಿದಂತೆ  ಎಲ್ಲ ಪ್ರಾಥಮಿಕ ಸಂಪರ್ಕಿತರನ್ನು ಪ್ರತ್ಯೇಕವಾಸದಲ್ಲಿ ಇರಿಸಲಾಗಿದೆ. ಮಂಕಿಪಾಕ್ಸ್ ರೋಗ ಉಲ್ಬಣದ ಅವಧಿ 21 ದಿನಗಳಾಗಿವೆ.

ತಮ್ಮ ಸ್ನೇಹಿತರೊಬ್ಬರಿಗೂ ಸೋಂಕು ಹರಡಿರುವ ಬಗ್ಗೆ ಸೋಂಕಿತ ವ್ಯಕ್ತಿ ಬಲವಾದ ಅನುಮಾನ ವ್ಯಕ್ತಪಡಿಸಿದ್ದಾರೆ. ಯುಎಇಯಿಂದ ಬರುವಾರ ದೇಹವನ್ನು ಸಂಪೂರ್ಣ ಕವರ್ ಮಾಡಿಕೊಂಡಿದ್ದ ರೋಗಿಯು ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅಲ್ಲಿ ಮಂಕಿಪಾಕ್ಸ್ ರೋಗ ಲಕ್ಷಣಗಳು ಕಂಡುಬಂದ ಬಳಿಕ, ಆತನ ಮಾದರಿಯನ್ನು ರಾಷ್ಟ್ರೀಯ ವೈರಾಣು ಸಂಸ್ತೆಗೆ ಕಳುಹಿಸಲಾಗಿತ್ತು. ಗುರುವಾರ ಸಂಜೆ ಅದರ ವರದಿ ಬಂದಿದ್ದು, ವ್ಯಕ್ತಿಗೆ ಮಂಕಿಪಾಕ್ಸ್ ತಗುಲಿರುವುದು ದೃಢಪಟ್ಟಿದೆ.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago