Featured

ಭಾರತಕ್ಕೂ ಕಾಲಿಟ್ಟ ಮಂಕಿಪಾಕ್ಸ್  : ಕೇರಳದಲ್ಲಿ ಮೊದಲ ಪ್ರಕರಣ ದಾಖಲು- Vishwanews24

ಭಾರತಕ್ಕೂ ಕಾಲಿಟ್ಟ ಮಂಕಿಪಾಕ್ಸ್  : ಕೇರಳದಲ್ಲಿ ಮೊದಲ ಪ್ರಕರಣ ದಾಖಲು

ನವದೆಹಲಿ: ಪಾಶ್ಚಿಮಾತ್ಯ ದೇಶಗಳಲ್ಲಿ ಕಂಡುಬರುತ್ತಿದ್ದ ಮಂಕಿಪಾಕ್ಸ್‌ ವೈರಸ್‌ನ ಮೊದಲ ಪ್ರಕರಣ ಭಾರತದಲ್ಲಿ ವರದಿಯಾಗಿದೆ. ಕೇರಳದ ಒಬ್ಬ ವ್ಯಕ್ತಿಗೆ  ಮಂಕಿಪಾಕ್ಸ್ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೆಲ ದಿನಗಳ ಹಿಂದೆ ಯುಎಇಯಿಂದ ಆಗಮಿಸಿದ್ದ 35 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದೂ ತಿಳಿಸಿದ್ದಾರೆ.

ಅವರ ಪೋಷಕರು, ವಿಮಾನದಲ್ಲಿ ಸಮೀಪ ಕುಳಿತಿದ್ದ 11 ಮಂದಿ ಪ್ರಯಾಣಿಕರು, ಕ್ಯಾಬ್ ಮತ್ತು ಆಟೊ ಡ್ರೈವರ್‌ಗಳು, ಚಿಕಿತ್ಸೆ ನೀಡಿದ್ದ ಕೊಲ್ಲಂನ ಖಾಸಗಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಸೇರಿದಂತೆ  ಎಲ್ಲ ಪ್ರಾಥಮಿಕ ಸಂಪರ್ಕಿತರನ್ನು ಪ್ರತ್ಯೇಕವಾಸದಲ್ಲಿ ಇರಿಸಲಾಗಿದೆ. ಮಂಕಿಪಾಕ್ಸ್ ರೋಗ ಉಲ್ಬಣದ ಅವಧಿ 21 ದಿನಗಳಾಗಿವೆ.

ತಮ್ಮ ಸ್ನೇಹಿತರೊಬ್ಬರಿಗೂ ಸೋಂಕು ಹರಡಿರುವ ಬಗ್ಗೆ ಸೋಂಕಿತ ವ್ಯಕ್ತಿ ಬಲವಾದ ಅನುಮಾನ ವ್ಯಕ್ತಪಡಿಸಿದ್ದಾರೆ. ಯುಎಇಯಿಂದ ಬರುವಾರ ದೇಹವನ್ನು ಸಂಪೂರ್ಣ ಕವರ್ ಮಾಡಿಕೊಂಡಿದ್ದ ರೋಗಿಯು ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅಲ್ಲಿ ಮಂಕಿಪಾಕ್ಸ್ ರೋಗ ಲಕ್ಷಣಗಳು ಕಂಡುಬಂದ ಬಳಿಕ, ಆತನ ಮಾದರಿಯನ್ನು ರಾಷ್ಟ್ರೀಯ ವೈರಾಣು ಸಂಸ್ತೆಗೆ ಕಳುಹಿಸಲಾಗಿತ್ತು. ಗುರುವಾರ ಸಂಜೆ ಅದರ ವರದಿ ಬಂದಿದ್ದು, ವ್ಯಕ್ತಿಗೆ ಮಂಕಿಪಾಕ್ಸ್ ತಗುಲಿರುವುದು ದೃಢಪಟ್ಟಿದೆ.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

11 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

11 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

11 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

11 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago