Featured

ಭಾರತಕ್ಕೂ ಕಾಲಿಟ್ಟ ಮಂಕಿಪಾಕ್ಸ್  : ಕೇರಳದಲ್ಲಿ ಮೊದಲ ಪ್ರಕರಣ ದಾಖಲು- Vishwanews24

ಭಾರತಕ್ಕೂ ಕಾಲಿಟ್ಟ ಮಂಕಿಪಾಕ್ಸ್  : ಕೇರಳದಲ್ಲಿ ಮೊದಲ ಪ್ರಕರಣ ದಾಖಲು

ನವದೆಹಲಿ: ಪಾಶ್ಚಿಮಾತ್ಯ ದೇಶಗಳಲ್ಲಿ ಕಂಡುಬರುತ್ತಿದ್ದ ಮಂಕಿಪಾಕ್ಸ್‌ ವೈರಸ್‌ನ ಮೊದಲ ಪ್ರಕರಣ ಭಾರತದಲ್ಲಿ ವರದಿಯಾಗಿದೆ. ಕೇರಳದ ಒಬ್ಬ ವ್ಯಕ್ತಿಗೆ  ಮಂಕಿಪಾಕ್ಸ್ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೆಲ ದಿನಗಳ ಹಿಂದೆ ಯುಎಇಯಿಂದ ಆಗಮಿಸಿದ್ದ 35 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದೂ ತಿಳಿಸಿದ್ದಾರೆ.

ಅವರ ಪೋಷಕರು, ವಿಮಾನದಲ್ಲಿ ಸಮೀಪ ಕುಳಿತಿದ್ದ 11 ಮಂದಿ ಪ್ರಯಾಣಿಕರು, ಕ್ಯಾಬ್ ಮತ್ತು ಆಟೊ ಡ್ರೈವರ್‌ಗಳು, ಚಿಕಿತ್ಸೆ ನೀಡಿದ್ದ ಕೊಲ್ಲಂನ ಖಾಸಗಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಸೇರಿದಂತೆ  ಎಲ್ಲ ಪ್ರಾಥಮಿಕ ಸಂಪರ್ಕಿತರನ್ನು ಪ್ರತ್ಯೇಕವಾಸದಲ್ಲಿ ಇರಿಸಲಾಗಿದೆ. ಮಂಕಿಪಾಕ್ಸ್ ರೋಗ ಉಲ್ಬಣದ ಅವಧಿ 21 ದಿನಗಳಾಗಿವೆ.

ತಮ್ಮ ಸ್ನೇಹಿತರೊಬ್ಬರಿಗೂ ಸೋಂಕು ಹರಡಿರುವ ಬಗ್ಗೆ ಸೋಂಕಿತ ವ್ಯಕ್ತಿ ಬಲವಾದ ಅನುಮಾನ ವ್ಯಕ್ತಪಡಿಸಿದ್ದಾರೆ. ಯುಎಇಯಿಂದ ಬರುವಾರ ದೇಹವನ್ನು ಸಂಪೂರ್ಣ ಕವರ್ ಮಾಡಿಕೊಂಡಿದ್ದ ರೋಗಿಯು ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅಲ್ಲಿ ಮಂಕಿಪಾಕ್ಸ್ ರೋಗ ಲಕ್ಷಣಗಳು ಕಂಡುಬಂದ ಬಳಿಕ, ಆತನ ಮಾದರಿಯನ್ನು ರಾಷ್ಟ್ರೀಯ ವೈರಾಣು ಸಂಸ್ತೆಗೆ ಕಳುಹಿಸಲಾಗಿತ್ತು. ಗುರುವಾರ ಸಂಜೆ ಅದರ ವರದಿ ಬಂದಿದ್ದು, ವ್ಯಕ್ತಿಗೆ ಮಂಕಿಪಾಕ್ಸ್ ತಗುಲಿರುವುದು ದೃಢಪಟ್ಟಿದೆ.

 

Vishwa News 24

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ – vishwanews24

ಯೋಗೀಶ್ ಗೌಡ ಕೊಲೆ ಪ್ರಕರಣ:  ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ…

6 hours ago

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ – vishwanews24

ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…

7 hours ago

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ – vishwanews24

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…

8 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – vishwanews24

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…

8 hours ago

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

8 hours ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

9 hours ago